ಚುನಾವಣಾ ಆಯೋಗ ಮೋದಿ ಬಂಗಲೆ ಮುಂದೆ ಕೂತಿರುವ ನಾಯಿ: ಕಾಂಗ್ರೆಸ್ ನ ಭಾಯಿ ಜಗತಾಪ್ ವಿರುದ್ಧ ದೂರು ದಾಖಲು

ಜಗತಾಪ್ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಸಾಂವಿಧಾನಿಕ ಸಂಸ್ಥೆಯು ಇಂತಹ ಅಗೌರವವನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ಚುನಾವಣಾ ಆಯೋಗವನ್ನು ನಾಯಿಗೆ ಹೋಲಿಸಿದ್ದಾರೆ
 Bhai Jagtap
ಭಾಯಿ ಜಗತಾಪ್
Updated on

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಕಿರೀಟ್ ಸೋಮಯ್ಯ ಚುನಾವಣಾ ಆಯೋಗ (ಇಸಿ) ಮತ್ತು ಮುಂಬೈ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಜಗತಾಪ್ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಸಾಂವಿಧಾನಿಕ ಸಂಸ್ಥೆಯು ಇಂತಹ ಅಗೌರವವನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ಚುನಾವಣಾ ಆಯೋಗವನ್ನು ನಾಯಿಗೆ ಹೋಲಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಈ ರೀತಿಯ ನಿಂದನೆ ಮತ್ತು ಅಗೌರವವು ಸಂಪೂರ್ಣವಾಗಿ ತಪ್ಪು. ಇಂತಹ ಅವಮಾನ ಸಹಿಸಲು ಸಾಧ್ಯವಿಲ್ಲ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಮಯ್ಯ ಆಗ್ರಹಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗ ಮತ್ತು ಮುಂಬೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗವನ್ನು ನಾಯಿಗೆ ಹೋಲಿಸಿ ಜಗತಾಪ್ ಹೇಳಿಕೆ ನೀಡಿದ ನಂತರ ವಿವಾದ ಭುಗಿಲೆದ್ದಿದೆ. "ಚುನಾವಣಾ ಆಯೋಗ ನಾಯಿಯಂತೆ ವರ್ತಿಸುತ್ತಿದ್ದು, ನರೇಂದ್ರ ಮೋದಿ ಅವರ ಬಂಗಲೆಯ ಮುಂದೆ ಕೂತಿರುವ ನಾಯಿ ಎಂದು ಅವರು ಹೇಳಿದ್ದಾರೆ.

 Bhai Jagtap
ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಚುನಾವಣಾ ಆಯೋಗ ಹಾಗೂ ಇತರ ಏಜೆನ್ಸಿಗಳನ್ನು ಆಡಳಿತಾರೂಢ ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬರ್ಥದಲ್ಲಿ ಜಗತಾಪ್ ನೀಡಿರುವ ಹೇಳಿಕೆ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com