ದೆಹಲಿಯಲ್ಲಿ ಕೇಜ್ರಿವಾಲ್ ಮೇಲೆ ಲಿಕ್ವಿಡ್ ಎರಚಿದ ವ್ಯಕ್ತಿ ಬಂಧನ

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿ, ‘ಮಾಜಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರ ರಾಜಧಾನಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಇನ್ನು ಜನಸಾಮಾನ್ಯರ ಗತಿ ಏನು? ಎಂದು ಪ್ರಶ್ನಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಶನಿವಾರ ನಡೆದ ಪಾದಯಾತ್ರೆ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ ಎರಚಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿ, ‘ಮಾಜಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರ ರಾಜಧಾನಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಇನ್ನು ಜನಸಾಮಾನ್ಯರ ಗತಿ ಏನು? ಎಂದು ಪ್ರಶ್ನಿಸಿದೆ.

ಕೇಜ್ರಿವಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿ ಹಿಂದೆ ನಿಂತಿರುವ ಜನರತ್ತ ಕೈಬೀಸುತ್ತಿದ್ದ ವೇಳೆ ಅವರ ಬಳಿಗೆ ಬಂದ ವ್ಯಕ್ತಿಯೊಬ್ಬ ಮಾಜಿ ಸಿಎಂ ಮೇಲೆ ದ್ರವವನ್ನು ಎರಚಿದರು. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ತಡೆದರು. ನಂತರ ಕೇಜ್ರಿವಾಲ್ ಮತ್ತು ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಮುಖ ಒರೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅರವಿಂದ್ ಕೇಜ್ರಿವಾಲ್
ಅಬಕಾರಿ ನೀತಿ: ಕೇಜ್ರಿವಾಲ್ ವಿರುದ್ಧ ED ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಅದೇ ಪ್ರದೇಶದ ನಿವಾಸಿಯಾಗಿರುವ ಲಿಕ್ವಿಡ್ ಎರಚಿದ ವ್ಯಕ್ತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com