ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ನಾಸಿಕ್ ಕೋರ್ಟ್ ಸಮನ್ಸ್

ಮುಂದಿನ ವಿಚಾರಣೆಗೆ ವೈಯಕ್ತಿಕವಾಗಿ ಅಥವಾ ನಿಮ್ಮ ಕಾನೂನು ಪ್ರತಿನಿಧಿಯ ಮೂಲಕ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.
ರಾಹುಲ್ ಗಾಂಧಿ - ಸಾವರ್ಕರ್
ರಾಹುಲ್ ಗಾಂಧಿ - ಸಾವರ್ಕರ್
Updated on

ಮುಂಬೈ: ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ನಾಸಿಕ್‌ನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ದೀಪಾಲಿ ಪರಿಮಳ್ ಕಡುಸ್ಕರ್ ಅವರು, ಸೆಪ್ಟೆಂಬರ್ 27 ರಂದು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದು, ಮುಂದಿನ ವಿಚಾರಣೆಗೆ ವೈಯಕ್ತಿಕವಾಗಿ ಅಥವಾ ನಿಮ್ಮ ಕಾನೂನು ಪ್ರತಿನಿಧಿಯ ಮೂಲಕ ಹಾಜರಾಗಬೇಕು ಎಂದು ಸೂಚಿಸಿದೆ. ಆದರೆ ದಿನಾಂಕ ಇನ್ನೂ ನಿರ್ಧರಿಸಿಲ್ಲ.

ರಾಹುಲ್ ಗಾಂಧಿ ಅವರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಎನ್‌ಜಿಒವೊಂದರ ನಿರ್ದೇಶಕರಾಗಿರುವ ದೂರುದಾರರು ಆರೋಪಿಸಿದ್ದು, ತಾನು ಹಿಂಗೋಲಿಯಲ್ಲಿ ಗಾಂಧಿಯವರು ನಡೆಸಿದ ಪತ್ರಿಕಾಗೋಷ್ಠಿ ಮತ್ತು ನವೆಂಬರ್ 2022 ರಲ್ಲಿ ಕಾಂಗ್ರೆಸ್ ನಾಯಕ ಮಾಡಿದ ಭಾಷಣವನ್ನು ವೀಕ್ಷಿಸಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ - ಸಾವರ್ಕರ್
ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ವಿರುದ್ಧ ಉತ್ತರಪ್ರದೇಶ ನ್ಯಾಯಾಲಯದಲ್ಲಿ ದೂರು ದಾಖಲು

ದೂರುದಾರರ ಪ್ರಕಾರ, "ಸಾವರ್ಕರ್ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜಿನ್" ಎಂದು ರಾಹುಲ್ ಗಾಂಧಿ ಹೇಳಿದ್ದು, ಅದು ಮಾನಹಾನಿಕರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com