ತಿಮ್ಮಪ್ಪನ ಮೇಲೆ ನಂಬಿಕೆ ಇದೆ: ತಿರುಪತಿ ದೇವಸ್ಥಾನ ಪ್ರವೇಶಕ್ಕೂ ಮುನ್ನ ಪವನ್ ಕಲ್ಯಾಣ್ ಪುತ್ರಿ ಘೋಷಣೆ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ.
ಪವನ್ ಕಲ್ಯಾಣ್ ಹಾಗೂ ಪುತ್ರಿ
ಪವನ್ ಕಲ್ಯಾಣ್ ಹಾಗೂ ಪುತ್ರಿ
Updated on

ತಿರುಪತಿ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಪುತ್ರಿ ಬುಧವಾರ ತಿರುಮಲ ದೇವಸ್ಥಾನ ಪ್ರವೇಶಿಸುವ ಮುನ್ನ ವೆಂಕಟೇಶ್ವರನ ಮೇಲೆ ನಂಬಿಕೆ ಇದೆ ಎಂದು ಘೋಷಿಸಿದ್ದಾರೆ.

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ. ಹೀಗಾಗಿ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರಿ ಪಲಿನಾ ಅಂಜನಿ ಕೊನಿಡೆಲಾ ಅವರು ಹಿಂದೂಯೇತರರಾಗಿದ್ದು, ತಮ್ಮ ನಂಬಿಕೆ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಸಿಬ್ಬಂದಿ ನೀಡಿದ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಪಲಿನಾ ವೆಂಕಟೇಶ್ವರನಲ್ಲಿ ಭಕ್ತಿ ಹಾಗೂ ನಂಬಿಕೆ ಇರುವುದಾಗಿ ಘೋಷಿಸಿದ್ದಾರೆ.

ಪವನ್ ಕಲ್ಯಾಣ್ ಹಾಗೂ ಪುತ್ರಿ
ನನ್ನ ಮಕ್ಕಳು ಆರ್ಥೋಡಾಕ್ಸ್ ಕ್ರಿಶ್ಚಿಯನ್; ನಾನು ಮತಾಂತರಗೊಂಡಿದ್ದೇನೆ: DCM ಪವನ್ ಕಲ್ಯಾಣ್ ವಿಡಿಯೋ ವೈರಲ್

ಪಲಿನಾ ಅಂಜನಿ ಅವರು ಅಪ್ರಾಪ್ತರಾಗಿರುವುದರಿಂದ ಅವರ ತಂದೆ ಪವನ್ ಕಲ್ಯಾಣ್ ಅವರು ದಾಖಲೆಗಳನ್ನು ಅನುಮೋದಿಸಿದ್ದಾರೆ" ಎಂದು ಜನಸೇನಾ ಪಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ, ಪವನ್ ಕಲ್ಯಾಣ್ ಅವರು ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೇವಸ್ಥಾನ ಶುದ್ಧೀಕರಣಕ್ಕಾಗಿ ಮತ್ತು ಪಾಪಗಳಿಗೆ ಪ್ರಾಯಶ್ಚಿತ್ತಕ್ಕಾಗಿ 11 ದಿನಗಳ ದೀಕ್ಷೆಯ ಭಾಗವಾಗಿ ದೇವಾಲಯಕ್ಕೆ ಮೂರು ದಿನಗಳ ಭೇಟಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com