ನಾನು ಪಾಕಿಸ್ತಾನಕ್ಕೆ ಹೋಗುತ್ತಿರುವುದು ದ್ವಿಪಕ್ಷೀಯ ಚರ್ಚೆಗೆ ಅಲ್ಲ, ಬಹುಪಕ್ಷೀಯ ಕಾರ್ಯಕ್ರಮಕ್ಕೆ: ಎಸ್ ಜೈಶಂಕರ್

ಈ ಭೇಟಿಯು ಸುಮಾರು ಒಂದು ದಶಕದಲ್ಲಿ ಪಾಕಿಸ್ತಾನಕ್ಕೆ ಭಾರತೀಯ ಮಂತ್ರಿಯೊಬ್ಬರು ನೀಡುತ್ತಿರುವ ಮೊದಲ ಭೇಟಿಯಾಗಿದೆ.
ಎಸ್ ಜೈಶಂಕರ್
ಎಸ್ ಜೈಶಂಕರ್
Updated on

ನವದೆಹಲಿ: ಅಕ್ಟೋಬರ್ ಮಧ್ಯಭಾಗದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ನಿನ್ನೆ ಸುದ್ದಿ ಪ್ರಕಟವಾಗಿತ್ತು.

ಇದಕ್ಕೆ ಇಂದು ಸ್ಪಷ್ಟನೆ ನೀಡಿರುವ ಸಚಿವ ಜೈಶಂಕರ್ ಅವರು, ತಮ್ಮ ಭೇಟಿಯು ಬಹುಪಕ್ಷೀಯ ಕಾರ್ಯಕ್ರಮಕ್ಕಾಗಿಯೇ ಹೊರತು ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತಾದ ದ್ವಿಪಕ್ಷೀಯ ಚರ್ಚೆಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ಎಸ್ ಸಿಒದ ಉತ್ತಮ ಸದಸ್ಯನಾಗಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ" ಎಂದರು.

ನಾನು ವಿನಯಶೀಲ ಮತ್ತು ನಾಗರಿಕ ವ್ಯಕ್ತಿಯಾಗಿರುವುದರಿಂದ, ಅದಕ್ಕೆ ತಕ್ಕಂತೆ ವರ್ತಿಸುತ್ತೇನೆ ಎಂದು ಹೇಳಿದರು.

ಈ ಭೇಟಿಯು ಸುಮಾರು ಒಂದು ದಶಕದಲ್ಲಿ ಪಾಕಿಸ್ತಾನಕ್ಕೆ ಭಾರತೀಯ ಮಂತ್ರಿಯೊಬ್ಬರು ನೀಡುತ್ತಿರುವ ಮೊದಲ ಭೇಟಿಯಾಗಿದೆ, ಕಾಶ್ಮೀರ ಸಮಸ್ಯೆ ಮತ್ತು ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಎರಡು ನೆರೆಹೊರೆಯವರ ನಡುವಿನ ಸಂಬಂಧಗಳು ಬಿಕ್ಕಟ್ಟಾಗಿಯೇ ಉಳಿದಿದೆ.

ಪಾಕಿಸ್ತಾನವು ಅಕ್ಟೋಬರ್ 15 ಮತ್ತು 16 ರಂದು ಎಸ್ ಸಿಒ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ಸಭೆಯನ್ನು ಆಯೋಜಿಸುತ್ತಿದೆ.

ಹಿರಿಯ ಸಚಿವರನ್ನು ಕಳುಹಿಸುವ ನಿರ್ಧಾರವು ಪ್ರಾದೇಶಿಕ ಭದ್ರತಾ ಸಹಕಾರವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಎಸ್ ಸಿಒಗೆ ಭಾರತದ ಬದ್ಧತೆಯ ಪ್ರದರ್ಶನವಾಗಿದೆ.

ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ 2019 ರ ಫೆಬ್ರವರಿಯಲ್ಲಿ ಪಾಕಿಸ್ತಾನದ ಬಾಲಾಕೋಟ್‌ನಲ್ಲಿನ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ತರಬೇತಿ ಶಿಬಿರವನ್ನು ಭಾರತದ ಯುದ್ಧ ವಿಮಾನಗಳು ಹೊಡೆದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ತೀವ್ರವಾಗಿ ಹದಗೆಟ್ಟವು.

ಆಗಸ್ಟ್ 5, 2019 ರಂದು ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಅಧಿಕಾರಗಳನ್ನು ಹಿಂತೆಗೆದುಕೊಳ್ಳುವುದಾಗಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಬಗ್ಗೆ ಘೋಷಿಸಿದ ನಂತರ ಸಂಬಂಧಗಳು ಮತ್ತಷ್ಟು ಹದಗೆಟ್ಟವು.

ಎಸ್ ಜೈಶಂಕರ್
9 ವರ್ಷಗಳಲ್ಲಿ ಇದೇ ಮೊದಲು; ಪಾಕಿಸ್ತಾನಕ್ಕೆ S Jaishankar ಭೇಟಿ; ಅಚ್ಚರಿ ನಡೆ ಹಿಂದೆ ಮಹತ್ವದ ಕಾರಣ!

ದೆಹಲಿಯು ಆರ್ಟಿಕಲ್ 370 ನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವು ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ತಗ್ಗಿಸಿತು. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಯ ಸಂಬಂಧವನ್ನು ಬಯಸುತ್ತದೆ ಎಂದು ಹೇಳುತ್ತಾ ಬಂದಿದೆ, ಆದರೆ ಅಂತಹ ಸಂಬಂಧಕ್ಕಾಗಿ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿ ಇಸ್ಲಾಮಾಬಾದ್‌ಗೆ ಇದೆ ಎಂದು ಒತ್ತಾಯಿಸುತ್ತದೆ.

ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಮೇ 2023 ರಲ್ಲಿ ಗೋವಾದಲ್ಲಿ ಎಸ್‌ಸಿಒ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳ ವೈಯಕ್ತಿಕ ಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಿದ್ದರು. ಸುಮಾರು 12 ವರ್ಷಗಳ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವರೊಬ್ಬರ ಭಾರತ ಭೇಟಿ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com