ಜಮ್ಮು-ಕಾಶ್ಮೀರದಲ್ಲಿ 30-35 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ: ರಾಜ್ಯಾಧ್ಯಕ್ಷ ರವೀಂದರ್ ರೈನಾ

ತಮ್ಮ ನಿವಾಸದಲ್ಲಿ ಹವನ ಮಾಡಿದ ನಂತರ, ನೌಶೇರಾ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಯೊಬ್ಬರು, ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಬೆಂಬಲಿತ ಪಕ್ಷಗಳು ಪೂರ್ಣ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸವಿದೆ. ನಾವು 30-35 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ 30-35 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ: ರಾಜ್ಯಾಧ್ಯಕ್ಷ ರವೀಂದರ್ ರೈನಾ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ 30ರಿಂದ 35 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಜೆ-ಕೆ ಬಿಜೆಪಿ ಮುಖ್ಯಸ್ಥ ಮತ್ತು ನೌಶೇರಾ ವಿಧಾನಸಭೆಯ ಅಭ್ಯರ್ಥಿ ರವೀಂದರ್ ರೈನಾ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಹರಿಯಾಣದ ಎಲ್ಲಾ 22 ಜಿಲ್ಲೆಗಳಲ್ಲಿ 90 ವಿಧಾನಸಭಾ ಸ್ಥಾನಗಳು ಮತ್ತು ಜೆ & ಕೆ ಎಲ್ಲಾ 20 ಜಿಲ್ಲೆಗಳಲ್ಲಿ 90 ಸ್ಥಾನಗಳ ಅಭ್ಯರ್ಥಿಗಳ ಭವಿಷ್ಯ ಇಂದು ಮಧ್ಯಾಹ್ನದ ಹೊತ್ತಿಗೆ ನಿರ್ಧಾರವಾಗಲಿದೆ.

ತಮ್ಮ ನಿವಾಸದಲ್ಲಿ ಹವನ ಮಾಡಿದ ನಂತರ, ನೌಶೇರಾ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಯೊಬ್ಬರು, ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಬೆಂಬಲಿತ ಪಕ್ಷಗಳು ಪೂರ್ಣ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸವಿದೆ. ನಾವು 30-35 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಕವಿಂದರ್ ಗುಪ್ತಾ ಪ್ರತಿಪಾದಿಸಿದ್ದಾರೆ.

ಬಿಜೆಪಿಯು ಜೆ-ಕೆಯಲ್ಲಿ ಜನರನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ದಿದೆ, ಪ್ರತ್ಯೇಕತಾವಾದ, ಭಯೋತ್ಪಾದನೆ, ಭ್ರಷ್ಟಾಚಾರ ಮತ್ತು ರಾಜವಂಶಗಳಿಂದ ಅವರನ್ನು ಮುಕ್ತಗೊಳಿಸಿದ್ದಾರೆ ಭಯೋತ್ಪಾದನೆಯಿಂದ ಪ್ರವಾಸೋದ್ಯಮದವರೆಗೆ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ನಾವು ಪಕ್ಷವನ್ನು ರಚಿಸುತ್ತೇವೆ ಎಂದು ಗುಪ್ತಾ ಎಎನ್‌ಐಗೆ ತಿಳಿಸಿದರು.

ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಪರವಾಗಿ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಹರಿಯಾಣದಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಐತಿಹಾಸಿಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಪಕ್ಷವು ದಶಕ ನಂತರ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.

ಲೋಕಸಭಾ ಚುನಾವಣೆಯ ನಂತರ ಹರಿಯಾಣದಲ್ಲಿನ ಚುನಾವಣೆಗಳು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೊದಲ ಪ್ರಮುಖ ನೇರ ಸ್ಪರ್ಧೆಯಾಗಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಚುನಾವಣೆಗಳು ನಡೆಯಲಿರುವ ಇತರ ರಾಜ್ಯಗಳಲ್ಲಿ ತಮ್ಮ ಪರವಾಗಿ ಜನಾಭಿಪ್ರಾಯ ರೂಪಿಸಲು ಪಕ್ಷಗಳು ಹವಣಿಸುತ್ತಿವೆ.

ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಐಎನ್‌ಎಲ್‌ಡಿ-ಬಿಎಸ್‌ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷಗಳು ಕಣದಲ್ಲಿರುವ ಪ್ರಮುಖ ಪಕ್ಷಗಳಾಗಿವೆ.ಆದರೆ ಬಹುತೇಕ ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com