ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್: 371 ಕೋಟಿ ರೂ ಹಗರಣ ಪ್ರಕರಣದಲ್ಲಿ ಇಡಿಯಿಂದ ಕ್ಲೀನ್ ಚಿಟ್!

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ವಾಸ್ತವವಾಗಿ, 371 ಕೋಟಿ ರೂಪಾಯಿಗಳ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ಕ್ಲೀನ್ ಚಿಟ್ ನೀಡಿದೆ.
Chandrababu Naidu
ಚಂದ್ರಬಾಬು ನಾಯ್ಡು
Updated on

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ವಾಸ್ತವವಾಗಿ, 371 ಕೋಟಿ ರೂಪಾಯಿಗಳ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ಕ್ಲೀನ್ ಚಿಟ್ ನೀಡಿದೆ.

ನಾಯ್ಡು ಅವರನ್ನು ಕಳೆದ ವರ್ಷ ಅಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆರಂಭಿಸಿದ ತನಿಖೆಯ ಮೇಲೆ ಬಂಧಿಸಲಾಯಿತು. 2023ರ ಅಕ್ಟೋಬರ್ 31ರಂದು ಮಧ್ಯಂತರ ಜಾಮೀನು ಪಡೆಯುವ ಮೊದಲು 50 ದಿನಗಳನ್ನು ಜೈಲಿನಲ್ಲಿ ಕಳೆದರು. ಆಂಧ್ರಪ್ರದೇಶ ಸಿಐಡಿ ನಡೆಸಿದ ತನಿಖೆಯ ಪ್ರಕಾರ ಕಳೆದ ವರ್ಷ ಸೆಪ್ಟೆಂಬರ್ 9ರಂದು ನಾಯ್ಡು ಅವರನ್ನು ಬಂಧಿಸಲಾಯಿತು.

ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥರ ಅರ್ಜಿಯು ನ್ಯಾಯಾಲಯದಲ್ಲಿ ಇತ್ಯರ್ಥವಾಗದೇ ಇರುವುದರಿಂದ ಅಕ್ಟೋಬರ್ 18ರವರೆಗೆ ಫೈಬರ್ ನೆಟ್ ಪ್ರಕರಣದಲ್ಲಿ ಟಿಡಿಪಿ ಮುಖ್ಯಸ್ಥರನ್ನು ಬಂಧಿಸುವುದಿಲ್ಲ ಎಂದು ಆಂಧ್ರಪ್ರದೇಶ ಪೊಲೀಸರು ಅಕ್ಟೋಬರ್ 13ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಕೌಶಲ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ನಾಯ್ಡು ಅವರನ್ನು ರಾಜಮಹೇಂದ್ರವರಂ ಜೈಲಿನಲ್ಲಿ ಇರಿಸಲಾಗಿತ್ತು.

Chandrababu Naidu
ತಿರುಪತಿ ಲಡ್ಡು ವಿವಾದ: ತನಿಖೆಗೆ ಎಸ್ಐಟಿ ರಚನೆ- ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಾಯ್ಡುಗೆ ಜಾಮೀನು ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಅವರು 2023ರ ಅಕ್ಟೋಬರ್ 31ರಂದು ಮಧ್ಯಂತರ ಪರಿಹಾರವನ್ನು ಪಡೆದರು. ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕನಿಗೆ ನವೆಂಬರ್ 20 ರಂದು ಆಂಧ್ರಪ್ರದೇಶ ಹೈಕೋರ್ಟ್ ನಿಯಮಿತ ಜಾಮೀನು ನೀಡಿತು. ಒಂದು ವಾರದ ನಂತರ, ಸಾರ್ವಜನಿಕ ರ್ಯಾಲಿಗಳು ಮತ್ತು ಸಭೆಗಳಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com