ಒಮರ್ ಅಬ್ದುಲ್ಲಾ ಸಂಪುಟದಲ್ಲಿ ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ!

ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
Omar Abdullah
ಒಮರ್ ಅಬ್ದುಲ್ಲಾ online desk
Updated on

ಶ್ರೀನಗರ: ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಬಿಜೆಪಿಯ ಮಾಜಿ ನಾಯಕ ಸುರೇಂದ್ರ ಚೌಧರಿಗೆ ತಮ್ಮ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಸುರೇಂದ್ರ ಚೌಧರಿ ಜಮ್ಮುವಿನ ನೌಶೇರಾದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.

"ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದು ನಮ್ಮ ಪ್ರಯತ್ನವಾಗಿದೆ" ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

"ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದು ನಮ್ಮ ಪ್ರಯತ್ನವಾಗಿದೆ" ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಐವರು ಸಚಿವರಾದ ಸಕೀನಾ ಮಸೂದ್ (ಇಟೂ), ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಮೂರು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಕ್ರಮೇಣ ಭರ್ತಿ ಮಾಡಲಾಗುವುದು ಎಂದು ಅಬ್ದುಲ್ಲಾ ಹೇಳಿದರು.

Omar Abdullah
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

ನೌಶೇರಾದಿಂದ ಬಿಜೆಪಿಯ ಜಮ್ಮು-ಕಾಶ್ಮೀರದ ಅಧ್ಯಕ್ಷ ರವೀಂದರ್ ರೈನಾ ಅವರನ್ನು 7,819 ಮತಗಳಿಂದ ಸೋಲಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ಸದಸ್ಯ ಚೌಧರಿ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ, ಆದ್ದರಿಂದ ಜಮ್ಮುವಿನ ಜನರು ಸರ್ಕಾರದಿಂದ ಹೊರಗುಳಿದಿದ್ದಾರೆಂದು ಭಾವಿಸುವುದಿಲ್ಲ ಎಂದು ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com