ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: 10 ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ; ಯಾವುದೇ ಪಿತೂರಿ ಇಲ್ಲ- ವಿಮಾನಯಾನ ಸಚಿವ

ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಈ ವಾರ ಅನೇಕ ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದ ಅರ್ಧ ಡಜನ್ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸೈಬರ್ ಭದ್ರತಾ ಏಜೆನ್ಸಿಗಳು ಅಮಾನತುಗೊಳಿಸಿವೆ ಅಥವಾ ನಿರ್ಬಂಧಿಸಿವೆ.

ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ವೇಳೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ವಿಮಾನ ಸ್ಫೋಟಿಸುವ ಬೆದರಿಕೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ಹೇಳಿದ್ದಾರೆ.

ಸುಮಾರು ಏಳು-ಎಂಟು ಸಾಮಾಜಿಕ ಮಾಧ್ಯಮ ಖಾತೆಗಳು, ಅವುಗಳಲ್ಲಿ ಹೆಚ್ಚಿನವು ಎಕ್ಸ್ ಗೆ ಸೇರಿದ್ದು, ಸೋಮವಾರದಿಂದ ಅವುಗಳನ್ನು ಅಮಾನತುಗೊಳಿಸಲಾಗಿದೆ ಅಥವಾ ನಿರ್ಬಂಧಿಸಲಾಗಿದೆ. ದೇಶಿಯ ಹಾಗೂ ಅಂತಾರಾಷ್ಟ್ರೀಯ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ವರ್ಚುಯಲ್ ಮೂಲಕ ಹುಸಿ ಬಾಂಬ್ ಮತ್ತು ಉಗ್ರರ ದಾಳಿ ಬೆದರಿಕೆ ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಸಾಂದರ್ಭಿಕ ಚಿತ್ರ
ವಿಮಾನಗಳಿಗೆ ಬಾಂಬ್ ಬೆದರಿಕೆ: ಛತ್ತೀಸ್‌ಗಢದ ಅಪ್ರಾಪ್ತ ಬಾಲಕ ಪೊಲೀಸ್ ವಶಕ್ಕೆ; ತಂದೆಯ ವಿಚಾರಣೆ

ಬಾಂಬ್ ಇಡಲಾಗಿದೆ. ರಕ್ತ ಎಲ್ಲೆಡೆ ಹರಡುತ್ತದೆ. ಸ್ಫೋಟಕ ಸಾಧನಗಳು, ಇದು ತಮಾಷೆಯಲ್ಲ ಮತ್ತು ನೀವೆಲ್ಲರೂ ಸಾಯುತ್ತೀರಿ ಎಂಬಂತಹ ಒಂದೇ ಪದ, ಸಾಲುಗಳನ್ನು ಬಹುತೇಕ ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವುದನ್ನು ಏಜೆನ್ಸಿಗಳು ಪತ್ತೆ ಹಚ್ಚಿವೆ.

ಇಂತಹ ಪ್ರತಿಯೊಂದು ನಕಲಿ ಬೆದರಿಕೆ ಸಂದೇಶ ಕುರಿತು ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಳ್ಳುವುದರ ಹೊರತಾಗಿ ಯಾವ್ ಆನ್ ಲೈನ್ ನಿಂದ ಇಂತಹ ಫೋಸ್ಟ್ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲು ಏಜೆನ್ಸಿಗಳು 'ಸೈಬರ್ ಗಸ್ತು' ಹೆಚ್ಚಿಸಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com