ತಮಿಳು ನಾಡಗೀತೆಯಲ್ಲಿ ದ್ರಾವಿಡ ಶಬ್ದ ಕೈಬಿಟ್ಟಿದ್ದಕ್ಕೆ ಆಕ್ಷೇಪ: ಗವರ್ನರ್ ವಾಪಸ್ ಕರೆಸಿಕೊಳ್ಳುವುದಕ್ಕೆ ಸಿಎಂ ಆಗ್ರಹ

ಭಾರತವನ್ನು ಆಚರಿಸುವ ನೆಪದಲ್ಲಿ ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ ಎಂದು ಸ್ಟಾಲಿನ್ ಎಕ್ಸ್‌ನಲ್ಲಿ ಬರೆದಿದ್ದಾರೆ.
Tamil Nadu CM MK Stalin Governor RN Ravi
ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್, ರಾಜ್ಯಪಾಲonline desk
Updated on

ಚೆನ್ನೈ: ತಮಿಳುನಾಡಿನಲ್ಲಿ ರಾಜ್ಯಪಾಲ- ಸಿಎಂ ನಡುವಿನ ತಿಕ್ಕಾಟ ಮುಂದಿನ ಹಂತಕ್ಕೆ ಹೋಗಿದೆ.

ಕಾರ್ಯಕ್ರಮವೊಂದರಲ್ಲಿ ತಮಿಳು ನಾಡಗೀತೆ ಹಾಡಬೇಕಾದರೆ ದ್ರಾವಿಡ ನಾಲ್ ತಿರುನಾಡು ಎಂಬ ಪದಗುಚ್ಛವನ್ನು ಕೈಬಿಡಲಾಗಿದೆ ಈ ಕಾರಣದಿಂದ ರಾಜ್ಯಪಾಲ ಆರ್ ಎನ್ ರವಿ ಅವರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಹೇಳಿದ್ದಾರೆ.

"ರಾಜ್ಯಪಾಲರೇ, ನೀವು ಆರ್ಯರೇ? ದ್ರಾವಿಡ ಪದವನ್ನು ತೆಗೆದುಹಾಕುವುದು ಮತ್ತು ತಮಿಳು ಥಾಯ್ ಶುಭಾಶಯಗಳನ್ನು ಹೇಳುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ! ಕಾನೂನಿನ ಪ್ರಕಾರ ನಡೆದುಕೊಳ್ಳದ ಮತ್ತು ಅವರ ಇಚ್ಛೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಯು ಆ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ ಎಂದು ಸ್ಟಾಲಿನ್ ಎಕ್ಸ್‌ನಲ್ಲಿ ಬರೆದಿದ್ದಾರೆ.

"ದ್ರಾವಿಡ ಅಲರ್ಜಿಯಿಂದ ಬಳಲುತ್ತಿರುವ ರಾಜ್ಯಪಾಲರು ರಾಷ್ಟ್ರಗೀತೆಯಲ್ಲಿ ದ್ರಾವಿಡವನ್ನು ಬಿಡಲು ಕೇಳುತ್ತಾರೆಯೇ? ತಮಿಳುನಾಡು ಮತ್ತು ತಮಿಳುನಾಡಿನ ಜನರ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸುತ್ತಿರುವ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು" ಎಂದು ಎಂಕೆ ಸ್ಟ್ಯಾಲಿನ್ ಆಗ್ರಹಿಸಿದ್ದಾರೆ.

ರಾಜ್ಯಪಾಲ ರವಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೂರದರ್ಶನ ಕೇಂದ್ರ ಚೆನ್ನೈನ ಹಿಂದಿ ಮಾಸಾಚರಣೆ ಸಮಾರಂಭವನ್ನು ಸ್ಟಾಲಿನ್ ತೀವ್ರವಾಗಿ ಖಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com