ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ Waqf Bill ಜಟಾಪಟಿ: ಗಾಜಿನ ಬಾಟಲಿ ಹೊಡೆದ TMC ನಾಯಕ; ಅಮಾನತು ಶಿಕ್ಷೆ!

ಕೇಂದ್ರ ಸರ್ಕಾರದ ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ, ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಕೋಪದಿಂದ ಗಾಜಿನ ನೀರಿನ ಬಾಟಲಿ ಹೊಡೆದಿದ್ದು ಈ ವೇಳೆ ಅವರ ಕೈ ಬೆರಳುಗಳಿಗೆ ಗಾಯವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
TMC MP smashes glass bottle
ಗಾಜಿನ ಬಾಟಲಿ ಹೊಡೆದ TMC ನಾಯಕ
Updated on

ನವದೆಹಲಿ: ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ BJP ಮತ್ತು TMC ನಾಯಕರ ನಡುವೆ ಜಟಾಪಟಿ ನಡೆದಿದ್ದು ಈ ವೇಳೆ ಟಿಎಂಸಿ ನಾಯಕ ಗಾಜಿನ ಬಾಟಲಿ ಹೊಡೆದು ಕೈಗೆ ಗಾಯ ಮಾಡಿಕೊಂಡ ಘಟನೆ ವರದಿಯಾಗಿದೆ.

ಹೌದು.. ಕೇಂದ್ರ ಸರ್ಕಾರದ ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ, ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಕೋಪದಿಂದ ಗಾಜಿನ ನೀರಿನ ಬಾಟಲಿ ಹೊಡೆದಿದ್ದು ಈ ವೇಳೆ ಅವರ ಕೈ ಬೆರಳುಗಳಿಗೆ ಗಾಯವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಮತ್ತು ಪಶ್ಚಿಮ ಬಂಗಾಳದ ಶ್ರೀರಾಮಪುರ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ ನಡುವೆ ತೀವ್ರ ವಾಗ್ವಾದ ನಡೆಯಿತು. ಈ ಸಂದರ್ಭದಲ್ಲಿ, ಕಲ್ಯಾಣ್ ಬ್ಯಾನರ್ಜಿ ಕೋಪದಿಂದ ಗಾಜಿನ ನೀರಿನ ಬಾಟಲಿಯನ್ನು ಒಡೆದರು. ಇದರಿಂದಾಗಿ ಅವರ ಬೆರಳಿಗೆ ಗಾಯವಾಯಿತು.

TMC MP smashes glass bottle
ವಕ್ಫ್ ತಿದ್ದುಪಡಿ ವಿಧೇಯಕ ಕುರಿತ ಚರ್ಚೆ ವೇಳೆ ಪ್ರತಿಪಕ್ಷಗಳಿಂದ ಜೆಪಿಸಿ ಮುಖ್ಯಸ್ಥರಿಗೆ ಬೆದರಿಕೆ: ತೇಜಸ್ವಿ ಸೂರ್ಯ ಆರೋಪ

ಬ್ಯಾನರ್ಜಿ ಕೋಪದಿಂದ ನೀರಿನ ಗಾಜಿನ ಬಾಟಲಿಯನ್ನು ಎತ್ತಿಕೊಂಡು ಮೇಜಿನ ಮೇಲೆ ಬಲವಾಗಿ ಹೊಡೆದರು. ಈ ವೇಳೆ ಅವರ ಹೆಬ್ಬೆರಳು ಮತ್ತು ತೋರು ಬೆರಳಿಗೆ ಗಾಯವಾಯಿತು. ನಂತರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರನ್ನು ಸಭೆಯಿಂದ ಹೊರಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದರು ಎನ್ನಲಾಗಿದೆ.

ಬಿಜೆಪಿ ಸಂಸದರಾದ ಜಗದಾಂಬಿಕಾ ಪಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಚರ್ಚೆಯ ವೇಳೆ ಕಲ್ಯಾಣ್ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ ನಡುವೆ ತೀವ್ರ ವಾಗ್ವಾದ ನಡೆಯಿತು, ನಂತರ ಪರಿಸ್ಥಿತಿ ಹದಗೆಟ್ಟಿತು. ವಕ್ಫ್ ಮಸೂದೆ ಮೇಲಿನ ಚರ್ಚೆಯ ವೇಳೆ ಕೆಲವು ಪ್ರತಿಪಕ್ಷ ಸದಸ್ಯರು ನಿವೃತ್ತ ನ್ಯಾಯಮೂರ್ತಿಗಳು ಮತ್ತು ವಕೀಲರ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಕಲ್ಯಾಣ್ ಬ್ಯಾನರ್ಜಿ ಅವರ ಈ ಅಶಿಸ್ತಿನ ವರ್ತನೆಗಾಗಿ ಅವರನ್ನು ವಕ್ಫ್ ಮಸೂದೆಯ ಜೆಪಿಸಿಯಿಂದ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.

TMC MP smashes glass bottle
ಒಂದು ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಜಮೀರ್‌ ಸೂಚನೆ

ಪರ-ವಿರೋಧ ನಿಲುವು

ಇನ್ನು ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು. ಪ್ರತಿಪಕ್ಷಗಳ ಸದಸ್ಯರು ಮಸೂದೆಯ ಸಮಾಲೋಚನೆ ಪ್ರಕ್ರಿಯೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರೆ, ಬಿಜೆಪಿ ಸಂಸದರು ಮಸೂದೆಯನ್ನು ಸಮರ್ಥಿಸಿಕೊಂಡರು. ರಾಜಕೀಯ ಕಾರಣಗಳಿಗಾಗಿ ಈ ಮಸೂದೆಯನ್ನು ತರಲಾಗುತ್ತಿದೆ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸುವ ಗುರಿ ಹೊಂದಿದೆ ಎಂದು ಪ್ರತಿಪಕ್ಷದ ಕೆಲವು ಸದಸ್ಯರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಸೂದೆ ತರುವ ‘ತರಾತುರಿ’ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com