Chhota Rajan: ಗ್ಯಾಂಗ್ ಸ್ಟರ್ ಗೆ ಬಿಗ್ ರಿಲೀಫ್; ಜೀವಾವಧಿ ಶಿಕ್ಷೆ ಅಮಾನತು ಮಾಡಿದ ಹೈಕೋರ್ಟ್, ಜಾಮೀನು ಮಂಜೂರು!

ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
Chhota Rajan
ಛೋಟಾ ರಾಜನ್
Updated on

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೇ ಹೈಕೋರ್ಟ್ ಬುಧವಾರ ಅಮಾನತು ಮಾಡಿದ್ದು, ಅಲ್ಲದೆ ಅವನಿಗೆ ಜಾಮೀನು ಮಂಜೂರು ಮಾಡಿದೆ.

2001ರಲ್ಲಿ ನಡೆದಿದ್ದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬ್ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ವಿಶೇಷ ಮೋಕಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಛೋಟಾ ರಾಜನ್ ಸಲ್ಲಿಸಿರುವ ಮೇಲ್ಮನವಿ ತೀರ್ಮಾನವಾಗುವವರೆಗೂ, ಆತನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವ ನ್ಯಾ. ರೇವತಿ ಮೋಹಿತೆ-ಡೇರೆ ಹಾಗೂ ಪೃಥ್ವಿರಾಜ್ ಚವಾಣ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಜಾಮೀನನ್ನೂ ಮಂಜೂರು ಮಾಡಿದೆ.

Chhota Rajan
ಗ್ಯಾಂಗ್ ಸ್ಟರ್ ಛೋಟಾ ಶಕೀಲ್‌ ಸಂಬಂಧಿ ಆರಿಫ್ ಅಬೂಬಕರ್ ಶೇಖ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನ

ಏನಿದು ಪ್ರಕರಣ?

ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಎರಡನೆ ಪ್ರಕರಣ ಇದಾಗಿದ್ದು, 2011ರಲ್ಲಿ ನಡೆದಿದ್ದ ಪತ್ರಕರ್ತ ಜ್ಯೋತಿರ್ಮೊಯ್ ಡೇ ಹತ್ಯೆ ಪ್ರಕರಣದಲ್ಲಿ ಆತ ಸೆರೆವಾಸ ಅನುಭವಿಸುತ್ತಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com