30 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ!

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಬಳಿ ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ತೀವ್ರ ಕಾರ್ಯಾಚರಣೆಯ ನಂತರ ಅಂತಿಮವಾಗಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.
File pic
ಬಂಧನ (ಸಾಂಕೇತಿಕ ಚಿತ್ರ)online desk
Updated on

ಮಂಗಳೂರು: ಸುಮಾರು 30 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿಯನ್ನು ಮಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಬಳಿ ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ತೀವ್ರ ಕಾರ್ಯಾಚರಣೆಯ ನಂತರ ಅಂತಿಮವಾಗಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.

ಸುರತ್ಕಲ್ ಪೊಲೀಸ್ ಠಾಣೆಯ ಪ್ರಕರಣದ ವಿವರಗಳ ಪ್ರಕಾರ, ಸುಮಾರು 30 ವರ್ಷಗಳ ಹಿಂದೆ ಕೊಲೆ ಮತ್ತು ಹಲ್ಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ರಕ್ಷಕ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಇನ್‌ಸ್ಟಿಟ್ಯೂಟ್ ಮಾಲೀಕ ಅಬ್ದುಲ್ಲಾ ದೆಹಲಿ ಮೂಲದ ಕಂಪನಿಯೊಂದಕ್ಕೆ ಐವರು ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದರು.

File pic
ಬೆಂಗಳೂರು ಕಟ್ಟಡ ಕುಸಿತ: ಕಾರ್ಮಿಕರು ಸಾವು; ಮಾಲೀಕ, ಗುತ್ತಿಗೆದಾರ ಬಂಧನ; Video

ಮಾರ್ಚ್ 12, 1995 ರ ರಾತ್ರಿ, ಸುಮಾರು 10:30 ಗಂಟೆಗೆ, ಭದ್ರತಾ ಸಿಬ್ಬಂದಿಗಳಾದ ಸುರೇಶ್, ನಾರಾಯಣ್ ಮತ್ತು ದೇವಣ್ಣ ಅವರು ಸ್ಥಳದಲ್ಲಿ ಕರ್ತವ್ಯದಲ್ಲಿದ್ದಾಗ ಮೂವರು ಅಪರಿಚಿತ ವ್ಯಕ್ತಿಗಳು ಬಂದರು. ಕಾವಲುಗಾರರು ಆ ತಡ ಗಂಟೆಯಲ್ಲಿ ಅವರ ಉಪಸ್ಥಿತಿಯನ್ನು ಪ್ರಶ್ನಿಸಿದರು, ಇದು ವಾಗ್ವಾದಕ್ಕೆ ಕಾರಣವಾಯಿತು. ಇಬ್ಬರು ವ್ಯಕ್ತಿಗಳು ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ನಾರಾಯಣ್ ಸಾವನ್ನಪ್ಪಿದ್ದರು.

ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಂಆರ್‌ಪಿಎಲ್ ಸೈಟ್‌ನ ಕ್ಯಾಂಟೀನ್ ಬಳಿ ಇಬ್ಬರು ಶಂಕಿತರನ್ನು ಅಚ್ಚನ್ ಕುಂಜು ಮತ್ತು ಜೋಸ್ ಕುಟ್ಟಿ ಎಂದು ಗುರುತಿಸಲಾಗಿದ್ದು, ಅದೇ ರಾತ್ರಿ ಮತ್ತೊಂದು ಪ್ರಕರಣದಲ್ಲಿ ಕೆಲವು ಕಾರ್ಮಿಕರೊಂದಿಗೆ ಪ್ರತ್ಯೇಕ ವಾಗ್ವಾದದಲ್ಲಿ ತೊಡಗಿದ್ದರು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com