ಪೊಲೀಸ್ ಕಸ್ಟಡಿಯಲ್ಲಿದ್ದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ: ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು

ವಿಶೇಷ ಡಿಜಿಪಿ (ಮಾನವ ಹಕ್ಕುಗಳು) ಪ್ರಬೋಧ್ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ಇದ್ದು, ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
Lawrence Bishnoi
ಲಾರೆನ್ಸ್ ಬಿಷ್ಣೋಯ್
Updated on

ಚಂಡೀಗಢ: ರಾಜ್ಯ ಪೊಲೀಸರ ವಶದಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನನ್ನು ಅನಧಿಕೃತವಾಗಿ ಟಿವಿ ಸಂದರ್ಶನ ಮಾಡಲು ಅವಕಾಶ ನೀಡಿದ ಆರೋಪದ ಮೇಲೆ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು (ಡಿಎಸ್‌ಪಿಗಳು) ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳನ್ನು ಪಂಜಾಬ್ ಸರ್ಕಾರ ಅಮಾನತುಗೊಳಿಸಿದೆ.

ನಿನ್ನೆ ಅಕ್ಟೋಬರ್ 25 ರಂದು ಪಂಜಾಬ್ ಗೃಹ ಕಾರ್ಯದರ್ಶಿ ಗುರುಕಿರತ್ ಕಿರ್ಪಾಲ್ ಸಿಂಗ್ ಅವರು ಹೊರಡಿಸಿದ ಆದೇಶದ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಸೆಪ್ಟೆಂಬರ್ 3 ಮತ್ತು 4, 2022 ರಂದು ಖರಾರ್ CIA ವಶದಲ್ಲಿದ್ದಾಗ ವೀಡಿಯೊ ಕಾನ್ಫರೆನ್ಸ್ ಸಂದರ್ಶನವನ್ನು ಖಾಸಗಿ ವಾಹಿನಿಯಲ್ಲಿ ಪ್ರಸಾರ ಮಾಡಿರುವುದನ್ನು ವಿಶೇಷ ತನಿಖಾ ತಂಡ (SIT) ಪತ್ತೆಹಚ್ಚಿದ ನಂತರ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಡಿಜಿಪಿ (ಮಾನವ ಹಕ್ಕುಗಳು) ಪ್ರಬೋಧ್ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ಇದ್ದು, ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಡಿಎಸ್‌ಪಿಗಳಾದ ಗುರ್ಶರ್ ಸಿಂಗ್ ಸಂಧು ಮತ್ತು ಸಮ್ಮರ್ ವನೀತ್ ಅವರಲ್ಲದೆ ಸಬ್ ಇನ್‌ಸ್ಪೆಕ್ಟರ್‌ಗಳಾದ ರೀನಾ, ಜಗತ್ಪಾಲ್ ಜಂಗು, ಶಗಂಜಿತ್ ಸಿಂಗ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮುಖ್ತಿಯಾರ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೆಬಲ್ ಓಂ ಪ್ರಕಾಶ್ ಅವರನ್ನು ಅಮಾನತುಗೊಳಿಸಲಾಗಿದೆ.

ಬಿಷ್ಣೋಯ್ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ಮತ್ತು ಇತ್ತೀಚೆಗೆ ಮುಂಬೈನಲ್ಲಿ ನಡೆದ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಸಂಚುಕೋರ ಎಂದು ಶಂಕಿಸಲಾಗಿದೆ. ಈತನ ವಿರುದ್ಧ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಲ್ಲಿ ಮೂರು ಡಜನ್‌ಗೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಇತ್ತೀಚೆಗೆ ಕೆನಡಾ ಸರ್ಕಾರವು ಕಳೆದ ವರ್ಷ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಏಜೆಂಟ್ ಎಂದು ಆರೋಪಿಸಿತ್ತು.

ಕಳೆದ ವರ್ಷ ಮಾರ್ಚ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಪಂಜಾಬ್ ಪೊಲೀಸರ ವಶದಲ್ಲಿದ್ದಾಗ ಎರಡು ಸಂದರ್ಶನಗಳನ್ನು ಟಿವಿ ಚಾನೆಲ್ ಪ್ರಸಾರ ಮಾಡಿತ್ತು. ಈ ಸಂದರ್ಶನಗಳು ಗಾಯಕ ಸಿದ್ದು ಮೂಸೆವಾಲಾ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ನಡೆದವು. ಪೊಲೀಸರು ದರೋಡೆಕೋರರೊಂದಿಗೆ ಕೈಜೋಡಿಸಿದ್ದಾರೆ ಎಂದು ಮೃತ ಗಾಯಕನ ತಂದೆ ಬಲ್ಕೌರ್ ಸಿಂಗ್ ಸಿಧು ಆರೋಪಿಸಿದ್ದರು. ನಂತರ, ಎಸ್‌ಐಟಿ ಅವರ ಆರೋಪ ನಿಜವೆಂದು ಪತ್ತೆಹಚ್ಚಿತ್ತು.

ಜನವರಿ 5 ರಂದು, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸುಲಿಗೆ, ಸಾಕ್ಷ್ಯ ಮರೆಮಾಚುವಿಕೆ, ಉದ್ದೇಶಪೂರ್ವಕವಾಗಿ ಅಪರಾಧದ ಬಗ್ಗೆ ಮಾಹಿತಿಯನ್ನು ತಡೆಹಿಡಿಯುವುದು, ಕ್ರಿಮಿನಲ್ ಬೆದರಿಕೆ, ಜೈಲು ಶಿಕ್ಷೆ, ಕ್ರಿಮಿನಲ್ ಪಿತೂರಿ ಮತ್ತು ಕಾರಾಗೃಹಗಳ (ಪಂಜಾಬ್ ತಿದ್ದುಪಡಿ) ಕಾಯ್ದೆ, 2011 ರ ಆರೋಪಗಳನ್ನು ದಾಖಲಿಸಿದೆ.

Lawrence Bishnoi
ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಸುಳಿವು ನೀಡಿದವರಿಗೆ 10 ಲಕ್ಷ ರೂ ಬಹುಮಾನ; NIA ಘೋಷಣೆ

ಆದರೆ ಅಕ್ಟೋಬರ್ 9 ರಂದು ಮೊಹಾಲಿಯ ನ್ಯಾಯಾಲಯದಲ್ಲಿ ಸಲ್ಲಿಸಿದ ಅಂತಿಮ ವರದಿಯಲ್ಲಿ, ಬಿಷ್ಣೋಯ್ ವಿರುದ್ಧ ಕ್ರಿಮಿನಲ್ ಬೆದರಿಕೆಯ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮರುದಿನವೇ ವಿಚಾರಣೆಗೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28 ರಂದು ನಿಗದಿಪಡಿಸಲಾಗಿದೆ.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಷ್ಣೋಯಿನನ್ನು ತಿಹಾರ್ ಜೈಲಿನಿಂದ ಖರಾರ್ ಸಿಐಎಗೆ ಕರೆತರುವ ಸಮಯದಲ್ಲಿ ಗುರ್ಶರ್ ಸಿಂಗ್ ಅವರನ್ನು ಡಿಎಸ್ಪಿ (ತನಿಖೆ) ಆಗಿ ನಿಯೋಜಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com