ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ವಿಫಲ: ಹರಿಯಾಣದಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧೆ ಸಾಧ್ಯತೆ

ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.
opposition leader Rahul Gandhi- AAP leader Aravind Kejriwal
ವಿಪಕ್ಷ ನಾಯಕ ರಾಹುಲ್ ಗಾಂಧಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್online desk
Updated on

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಬಹುತೇಕ ವಿಫಲವಾಗಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.

"ಹರಿಯಾಣದಲ್ಲಿ ಮೈತ್ರಿ ಮಾತುಕತೆ ಪತನದ ಅಂಚಿನಲ್ಲಿದೆ ಮತ್ತು ಎಎಪಿ ರಾಜ್ಯದ 90 ವಿಧಾನಸಭಾ ಸ್ಥಾನಗಳಲ್ಲಿ 50 ಸ್ಥಾನಗಳಲ್ಲಿ ಸ್ವಂತವಾಗಿ ಸ್ಪರ್ಧಿಸಲು ಯೋಜಿಸುತ್ತಿದೆ" ಎಂದು ಎಎಪಿ ಮೂಲಗಳು ಹೇಳಿವೆ.

opposition leader Rahul Gandhi- AAP leader Aravind Kejriwal
ಹರಿಯಾಣ: ಬಿಜೆಪಿಗೆ ಬಂಡಾಯದ ಬಿಸಿ; ಟಿಕೆಟ್ ವಂಚಿತ ಸಚಿವ ರಂಜಿತ್ ಚೌತಾಲಾ, ಶಾಸಕ ಲಕ್ಷ್ಮಣ್ ನಾಪಾ ರಾಜೀನಾಮೆ

ಹರಿಯಾಣದಲ್ಲಿ ಎಎಪಿ 10 ವಿಧಾನಸಭಾ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದರೆ, ಕಾಂಗ್ರೆಸ್ ಐದರಿಂದ ಏಳು ಸ್ಥಾನಗಳನ್ನು ನೀಡುತ್ತಿದೆ ಎಂದು ಪಕ್ಷದ ಒಳಗಿನವರು ಈ ಹಿಂದೆ ಹೇಳಿದ್ದರು. ಅಲ್ಲದೆ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಹರಿಯಾಣ, ಗುಜರಾತ್ ಮತ್ತು ದೆಹಲಿಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದವು.

ಹರಿಯಾಣದಲ್ಲಿ ಎಎಪಿಗೆ ಕುರುಕ್ಷೇತ್ರ ಲೋಕಸಭಾ ಸ್ಥಾನ ನೀಡಲಾಗಿತ್ತು. ಹರಿಯಾಣ ಎಎಪಿ ರಾಜ್ಯಾಧ್ಯಕ್ಷ ಸುಶೀಲ್ ಗುಪ್ತಾ ಅವರು ಕುರುಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ನವೀನ್ ಜಿಂದಾಲ್ ವಿರುದ್ಧ ಸೋತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com