'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ

ಭಾರತೀಯರು ಅಂತರ್ಗತವಾಗಿ ಜನರನ್ನು ಪ್ರೀತಿಸುತ್ತಾರೆ ಎಂಬುದನ್ನು ಯಾತ್ರೆ ಸಾಬೀತುಪಡಿಸಿತ್ತು. ದೇಶದ ಪ್ರತಿಯೊಂದು ಮೂಲೆಯಲ್ಲಿ ಪ್ರೀತಿಯ ಧ್ವನಿಯನ್ನು ಕೇಳಿಸಿಕೊಳ್ಳುವುದು ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.
'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ
Updated on

ನವದೆಹಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಭಾರೀ ಸದ್ದು ಮಾಡಿ ಅದು ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಕೂಡ ಮಾಡಿತು.

ಇಂದು ಅದರ ಎರಡನೇ ವಾರ್ಷಿಕೋತ್ಸವ, ಈ ಸಂದರ್ಭದಲ್ಲಿ ಸ್ಮರಿಸಿಕೊಂಡಿರುವ ರಾಹುಲ್ ಗಾಂಧಿ, ಭಾರತೀಯರು ಅಂತರ್ಗತವಾಗಿ ಜನರನ್ನು ಪ್ರೀತಿಸುತ್ತಾರೆ ಎಂಬುದನ್ನು ಯಾತ್ರೆ ಸಾಬೀತುಪಡಿಸಿತ್ತು. ದೇಶದ ಪ್ರತಿಯೊಂದು ಮೂಲೆಯಲ್ಲಿ ಪ್ರೀತಿಯ ಧ್ವನಿಯನ್ನು ಕೇಳಿಸಿಕೊಳ್ಳುವುದು ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು. ಹರ್ಷೋದ್ಘಾರದ ಜನಸಮೂಹ ಮತ್ತು ಘೋಷಣೆಗಳ ನಡುವೆ, ನನ್ನ ಪಕ್ಕದಲ್ಲಿರುವ ವ್ಯಕ್ತಿಯ ಮೇಲೆ ಸಂಪೂರ್ಣವಾಗಿ ಗಮನಹರಿಸುವ ಅವರ ಮಾತುಗಳನ್ನು ಕೇಳುವ ಶಕ್ತಿಯನ್ನು ನಾನು ಕಂಡುಹಿಡಿದಿದ್ದೇನೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಆ 145 ದಿನಗಳಲ್ಲಿ ಮತ್ತು ಅದರಿಂದಾಚೆಗೆ ಈ ಎರಡು ವರ್ಷಗಳಲ್ಲಿ ನಾನು ವಿವಿಧ ಹಿನ್ನೆಲೆಯ ಸಾವಿರಾರು ಭಾರತೀಯರ ಮಾತುಗಳನ್ನು ಆಲಿಸಿದ್ದೇನೆ. ಪ್ರತಿಯೊಂದು ಧ್ವನಿಯು ಬುದ್ಧಿವಂತಿಕೆಯನ್ನು ಹೊತ್ತಿದೆ, ನನಗೆ ಹೊಸದನ್ನು ಕಲಿಸುತ್ತದೆ ಮತ್ತು ಪ್ರತಿಯೊಬ್ಬರೂ ನಮ್ಮ ಪ್ರೀತಿಯ ಭಾರತ ಮಾತೆಯನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದಾರೆ.

'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

ಭಾರತೀಯರು ಸ್ವಾಭಾವಿಕವಾಗಿ ಪ್ರೀತಿಸುವ ಜನರು ಎಂಬುದನ್ನು ಈ ಯಾತ್ರೆ ಸಾಬೀತುಪಡಿಸಿದೆ. ನಾನು ಈ ಪಯಣವನ್ನು ಪ್ರಾರಂಭಿಸಿದಾಗ ಪ್ರೀತಿಯು ದ್ವೇಷವನ್ನು ಜಯಿಸುತ್ತದೆ ಮತ್ತು ಭರವಸೆಯು ಭಯವನ್ನು ಸೋಲಿಸುತ್ತದೆ ಎಂದು ನಾನು ಹೇಳಿದ್ದೆ, ಇಂದು ನಮ್ಮ ಧ್ಯೇಯವು ಒಂದೇ ಆಗಿರುತ್ತದೆ - ಭಾರತ ಮಾತೆಯ ಧ್ವನಿಯನ್ನು ಖಚಿತಪಡಿಸಿಕೊಳ್ಳಲು, ಪ್ರೀತಿಯ ಧ್ವನಿಯು ದೇಶದ ಮೂಲೆ ಮೂಲೆಗಳಲ್ಲಿ ಕೇಳಿಬರುತ್ತದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಸೆಪ್ಟೆಂಬರ್ 7, 2022 ರಂದು ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿ ಜನವರಿ 30, 2023 ರಂದು ಶ್ರೀನಗರದಲ್ಲಿ 145-ದಿನಗಳ ಪ್ರಯಾಣವನ್ನು ಮುಕ್ತಾಯಗೊಳಿಸಿದ್ದರು. ಮೆರವಣಿಗೆಯಲ್ಲಿ 12 ಸಾರ್ವಜನಿಕ ಸಭೆಗಳು, 100 ಕ್ಕೂ ಹೆಚ್ಚು ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಖ್ಯಾತ ಸೆಲೆಬ್ರಿಟಿಗಳಾದ ಕಮಲ್ ಹಾಸನ್, ಪೂಜಾ ಭಟ್, ರಿಯಾ ಸೇನ್, ಸ್ವರಾ ಭಾಸ್ಕರ್, ರಶ್ಮಿ ದೇಸಾಯಿ, ಆಕಾಂಕ್ಷಾ ಪುರಿ ಮತ್ತು ಅಮೋಲ್ ಪಾಲೇಕರ್ ಅವರಂತಹ ಚಲನಚಿತ್ರ ಮತ್ತು ಟಿವಿ ಮಾಧ್ಯಮ ಸೆಲೆಬ್ರಿಟಿಗಳು ಸೇರಿದಂತೆ ಅನೇಕರು ಬೆಂಬಲ ನೀಡಿದ್ದರು.

ಮಾಜಿ ಸೇನಾ ಮುಖ್ಯಸ್ಥ ಜನರಲ್ ದೀಪಕ್ ಕಪೂರ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್ ರಾಮದಾಸ್ ಸೇರಿದಂತೆ ಬರಹಗಾರರು, ಮಿಲಿಟರಿ ತಜ್ಞರು, ಭಾರತೀಯ ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್, ಮಾಜಿ ಹಣಕಾಸು ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಅವರಂತಹ ಪ್ರಸಿದ್ಧ ವ್ಯಕ್ತಿಗಳು ಸಹ ಯಾತ್ರೆಯಲ್ಲಿ ಭಾಗವಹಿಸಿದ್ದರು.

ವಿರೋಧ ಪಕ್ಷದ ನಾಯಕರಾದ ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ಮೆಹಬೂಬಾ ಮುಫ್ತಿ, ಶಿವಸೇನಾ (ಯುಬಿಟಿ) ನಾಯಕರಾದ ಆದಿತ್ಯ ಠಾಕ್ರೆ, ಪ್ರಿಯಾಂಕಾ ಚತುರ್ವೇದಿ ಮತ್ತು ಸಂಜಯ್ ರಾವತ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಕೂಡ ರಾಹುಲ್ ಗಾಂಧಿ ಅವರೊಂದಿಗೆ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com