ಮಹಾರಾಷ್ಟ್ರ ಬಿಜೆಪಿ ಮುಖಂಡನ ಮಗನಿಗೆ ಸೇರಿದ ಐಷಾರಾಮಿ ಕಾರು ಅಪಘಾತ: ಚಾಲಕನ ಬಂಧನ

ಸೋಮವಾರ ಮುಂಜಾನೆ ಇಲ್ಲಿನ ರಾಮದಾಸ್ಪೇಟ್ ಪ್ರದೇಶದಲ್ಲಿ ಬವಾಂಕುಲೆ ಅವರ ಪುತ್ರ ಸಂಕೇತ್ ಒಡೆತನದ ಆಡಿ ಕಾರು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಅಪಘಾತಕ್ಕೊಳಗಾದ ಕಾರು
ಅಪಘಾತಕ್ಕೊಳಗಾದ ಕಾರು
Updated on

ಮುಂಬಯಿ: ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಪುತ್ರನಿಗೆ ಸೇರಿದ ಐಷಾರಾಮಿ ಕಾರೊಂದು ನಾಗ್ಪುರದಲ್ಲಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಅರ್ಜುನ್ ಹಾವ್ರೆ ಎಂಬಾತನನ್ನು ಸೋಮವಾರ ರಾತ್ರಿ ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಸೋಮವಾರ ಮುಂಜಾನೆ ಇಲ್ಲಿನ ರಾಮದಾಸ್ಪೇಟ್ ಪ್ರದೇಶದಲ್ಲಿ ಬವಾಂಕುಲೆ ಅವರ ಪುತ್ರ ಸಂಕೇತ್ ಒಡೆತನದ ಆಡಿ ಕಾರು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ, ನಂತರ ಕಾರು ಚಾಲಕ ಹಾವ್ರೆ ಹಾಗೂ ಮತ್ತೊಬ್ಬ ಪ್ರಯಾಣಿಕ ರೋನಿತ್ ಚಿತ್ತಮ್ವಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅಪಘಾತಕ್ಕೊಳಗಾದ ಕಾರು
ಅಮೆರಿಕಾದಲ್ಲಿ ಭೀಕರ ಅಪಘಾತ: ಕಾರ್‌ಪೂಲಿಂಗ್ ಮೂಲಕ ತೆರಳುತ್ತಿದ್ದ ನಾಲ್ವರು ಭಾರತೀಯರ ಸಜೀವ ದಹನ

ಆಡಿ ಕಾರು ಮೊದಲು ದೂರುದಾರ ಜಿತೇಂದ್ರ ಸೋನಕಾಂಬಳೆ ಅವರ ಕಾರಿಗೆ ಡಿಕ್ಕಿ ಹೊಡೆದು ನಂತರ ಮೊಪೆಡ್‌ಗೆ ಡಿಕ್ಕಿ ಹೊಡೆದಿದ್ದರಿಂದ ಅದರಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಆಡಿ ಕಾರು ಮಂಕಾಪುರದ ಕಡೆಗೆ ಸಾಗುತ್ತಿದ್ದ ಇನ್ನೂ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಟಿ-ಪಾಯಿಂಟ್‌ನಲ್ಲಿ ವಾಹನವು ಪೋಲೋ ಕಾರಿಗೆ ಡಿಕ್ಕಿ ಹೊಡೆದಿದೆ. ಅದರಲ್ಲಿದ್ದವರು ಆಡಿಯನ್ನು ಹಿಂಬಾಲಿಸಿ ಮಂಕಾಪುರ ಸೇತುವೆಯ ಬಳಿ ನಿಲ್ಲಿಸಿದರು. ಇಬ್ಬರು ಚಾಲಕರು, ಚಾಲಕ ಅರ್ಜುನ್ ಹಾವ್ರೆ ಮತ್ತು ರೋನಿತ್ ಎಂದು ಗುರುತಿಸಲಾಗಿದೆ. ಇಬ್ಬರನ್ನು ತಹಸಿಲ್ ಪೊಲೀಸ್ ಠಾಣೆಗೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ತನಿಖೆಗಾಗಿ ಸೀತಾಬುಲ್ಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ನಡೆದಾಗ ಆಡಿ ಕಾರಿನಲ್ಲಿದ್ದವರು ಧರಂಪೇತ್‌ನ ಬಿಯರ್ ಬಾರ್‌ನಿಂದ ಹಿಂತಿರುಗುತ್ತಿದ್ದರು, ವೈದ್ಯಕೀಯ ಪರೀಕ್ಷೆಯಲ್ಲಿ ಆಲ್ಕೋಹಾಲ್ ಪತ್ತೆಯಾಗಿದೆ ಎಂದು ಅಧಿಕಾರಿ ಹೇಳಿದರು. ಬವಾಂಕುಲೆ ಆಡಿ ಕಾರನ್ನು ತಮ್ಮ ಮಗ ಸಂಕೇತ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com