ಮಧ್ಯ ಪ್ರದೇಶ: ಭಾರೀ ಮಳೆಗೆ ಗೋಡೆ ಕುಸಿದು ಏಳು ಮಂದಿ ಸಾವು

ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ
Updated on

ಡಾಟಿಯಾ: ಮಧ್ಯ ಪ್ರದೇಶದ ಡಾಟಿಯಾ ಪಟ್ಟಣದಲ್ಲಿ ಭಾರೀ ಮಳೆಯಿಂದಾಗಿ ಗುರುವಾರ ಮನೆಯ ಪಕ್ಕದ ಹಳೆಯ ಗೋಡೆ ಕುಸಿದು ಏಳು ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾಲ್ಕಾಪುರ ಪ್ರದೇಶದಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯೊಂದರ ಪಕ್ಕದಲ್ಲಿದ್ದ ಗೋಡೆಯು ಅದರ ಮೇಲೆ ಬಿದ್ದಿದ್ದು, ಒಂಬತ್ತು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಆ ಪೈಕಿ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಲಾಗಿದೆ ಎಂದು ಡಾಟಿಯಾ ಕಲೆಕ್ಟರ್ ಸಂದೀಪ್ ಮಕಿನ್ ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ
Madhya Pradesh: ಪ್ರವಾಸಕ್ಕೆ ಬಂದಿದ್ದ ತರಬೇತಿ ಸೇನಾಧಿಕಾರಿಗಳ ಮೇಲೆ ಡಕಾಯಿತರ ದಾಳಿ; ಗರ್ಲ್ ಫ್ರೆಂಡ್ ಮೇಲೆ ಗ್ಯಾಂಗ್ ರೇಪ್

ಘಟನೆ ನಡೆದ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com