ಅಪಘಾತ
ದೇಶ
ತಿರುಪತಿಯಿಂದ ವಾಪಸಾಗುತ್ತಿದ್ದ ವೇಳೆ ಅವಘಡ: ಕಾರಿನ ಮೇಲೆ ಲಾರಿ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು
ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತ ಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಲಾರಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಮೂವರು ಮೃತಪಟ್ಟಿದ್ದಾರೆ.
ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳ ನಿವಾಸಿಗಳಾದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ, ಮಂಜುನಾಥ್ ಮೃತ ದುರ್ದೈವಿಗಳು. ತಿರುಪತಿಗೆ ಹೋಗಿ, ಗುರುವಾರ ಸಂಜೆ ಚಿಕ್ಕಬಳ್ಳಾಪುರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ