ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ವಂಶ ರಾಜಕಾರಣ ಕೊನೆಯಾಗುತ್ತಿದೆ: ಪ್ರಧಾನಿ ಮೋದಿ

ಇದೇ ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣಾ ಪ್ರಚಾರ ಸಭೆ ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಉಸಿರು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ದೇಶದ ಈ ಸುಂದರ ನಾಡನ್ನು ಹಾಳುಮಾಡಿದ ವಂಶ ರಾಜಕಾರಣಿಗಳ ವಿರುದ್ಧ ತಮ್ಮ ಸರ್ಕಾರ ಹೊಸ ನಾಯಕತ್ವವನ್ನು ಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ದೋಡಾ ಜಿಲ್ಲೆಯಲ್ಲಿ ಇಂದು ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಮತ್ತು ನೀವು ಒಟ್ಟಾಗಿ ಜಮ್ಮು -ಕಾಶ್ಮೀರವನ್ನು ದೇಶದ ಸುರಕ್ಷಿತ ಮತ್ತು ಸಮೃದ್ಧ ಭಾಗವನ್ನಾಗಿ ಮಾಡೋಣ ಎಂದು ಹೇಳಿದರು.

ಇದೇ ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣಾ ಪ್ರಚಾರ ಸಭೆ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ಸ್ವಾತಂತ್ರ್ಯದ ನಂತರ, ಜಮ್ಮು ಮತ್ತು ಕಾಶ್ಮೀರವು ವಿದೇಶಿ ಶಕ್ತಿಗಳ ಗುರಿಯಾಯಿತು ನಂತರ ವಂಶ ರಾಜಕೀಯವು ಈ ಸುಂದರ ಪ್ರದೇಶವನ್ನು ಟೊಳ್ಳಾಗಿಸಿ ಹಾಳುಮಾಡಿತು. ಇಲ್ಲಿನ ವಂಶಾಡಳಿತ ರಾಜಕಾರಣಿಗಳು ತಮ್ಮ ಮಕ್ಕಳನ್ನು ಮುಂದಿಟ್ಟುಕೊಂಡು ಹೊಸ ನಾಯಕರನ್ನು ಬೆಳೆಯಲು ಬಿಡಲಿಲ್ಲ ಎಂದು ಆರೋಪಿಸಿದರು.

2014ರಲ್ಲಿ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಇಲ್ಲಿ ಯುವ ನಾಯಕತ್ವವನ್ನು ರೂಪಿಸುವತ್ತ ಸರ್ಕಾರ ಗಮನಹರಿಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com