ಕೇಜ್ರಿವಾಲ್ ರಾಜೀನಾಮೆ ನಿರ್ಧಾರ ಸ್ವಾಗತ, ಎರಡು ದಿನ ತಡವೇಕೆ: ದೆಹಲಿ ಕಾಂಗ್ರೆಸ್ ಪ್ರಶ್ನೆ!

ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ.
ಕೇಜ್ರಿವಾಲ್, ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್
ಕೇಜ್ರಿವಾಲ್, ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್
Updated on

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ನಿರ್ಧಾರವನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಭಾನುವಾರ ಸ್ವಾಗತಿಸಿದ್ದಾರೆ. ಆದರೆ ಎರಡು ದಿನಗಳ ವಿಳಂಬವನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಐಎಎನ್ ಎಸ್ ಸುದ್ದಿಸಂಸ್ಥೆಯೊಂದಿಗೆ ಪ್ರತಿಕ್ರಿಯಿಸಿದ ಯಾದವ್, ಕೇಜ್ರಿವಾಲ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಸ್ವಲ್ಪ ತಡವಾದರೂ ಇದು ಒಳ್ಳೆಯ ಕ್ರಮ ಎಂದು ಹೇಳಿದರು.

ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇನ್ನೂ ಎರಡು ದಿನ ಯಾಕೆ ಕಾಯುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನೀವು ರಾಜೀನಾಮೆ ನೀಡುವುದಾದರೆ ಕೂಡಲೇ ರಾಜೀನಾಮೆ ನೀಡಿ. ಉತ್ತಮ ಆಡಳಿತ ನಮ್ಮ ಒತ್ತಾಯವಾಗಿದ್ದು, ಸರ್ಕಾರವನ್ನು ಜೈಲಿನಿಂದ ಓಡಿಸಲು ಸಾಧ್ಯವಿಲ್ಲ ಎಂದರು.

ಕೇಜ್ರಿವಾಲ್, ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್
ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ

ಬದಲಾವಣೆಗೆ ಎಂದಿಗೂ ತಡಮಾಡಬಾರದು. ದೆಹಲಿ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಎರಡು, ನಾಲ್ಕು ಅಥವಾ ಐದು ತಿಂಗಳ ಹಿಂದೆಯೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದರೆ ನಾನು ಹೆಚ್ಚು ಸಂತೋಷವಾಗಿರುತ್ತಿದ್ದೆ ಎಂದು ದೇವೇಂದ್ರ ಯಾದವ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com