ವಿಕೆ ಸಕ್ಸೇನಾ - ಅರವಿಂದ್ ಕೇಜ್ರಿವಾಲ್‌
ವಿಕೆ ಸಕ್ಸೇನಾ - ಅರವಿಂದ್ ಕೇಜ್ರಿವಾಲ್‌

ನಾಳೆ ಸಂಜೆ 4:30ಕ್ಕೆ ಕೇಜ್ರಿವಾಲ್ ರಿಂದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಭೇಟಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ

ನಾಳೆ ಸಂಜೆ 4:30ಕ್ಕೆ ತಮ್ಮನ್ನು ಭೇಟಿ ಮಾಡಲು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್‌ ಅವರಿಗೆ ಅಪಾಯಿಂಟ್‌ಮೆಂಟ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
Published on

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆರು ತಿಂಗಳು ಜೈಲುವಾಸ ಮುಗಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಲಿದ್ದು, ಈ ವೇಳೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ನಾಳೆ ಸಂಜೆ 4:30ಕ್ಕೆ ತಮ್ಮನ್ನು ಭೇಟಿ ಮಾಡಲು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್‌ ಅವರಿಗೆ ಅಪಾಯಿಂಟ್‌ಮೆಂಟ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿ ಮಾಡಲು ಕೇಜ್ರಿವಾಲ್ ಸಮಯ ಕೋರಿದ್ದಾರೆ ಮತ್ತು ಅವರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಎಎಪಿ ಈ ಹಿಂದೆ ಹೇಳಿತ್ತು.

ವಿಕೆ ಸಕ್ಸೇನಾ - ಅರವಿಂದ್ ಕೇಜ್ರಿವಾಲ್‌
ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!

"ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ" ತಾವು ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಮತ್ತು ಮನೀಶ್ ಸಿಸೋಡಿಯಾ ಅವರು ಉಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕೆಲವು ದಿನಗಳಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಭಾನುವಾರ 48 ಗಂಟೆಗಳ ಒಳಗೆ ರಾಜೀನಾಮೆ ನೀಡುವುದಾಗಿ ಮತ್ತು ದೆಹಲಿಯಲ್ಲಿ ಶೀಘ್ರ ಚುನಾವಣೆ ನಡೆಸಬೇಕು ಎಂದು ಕೋರಿದ್ದರು.

ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಕೇಜ್ರಿವಾಲ್ ಮಾಡಿದ್ದರು ಮತ್ತು

ಒಂದೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಿ ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com