ಬುಲ್ಡೋಜರ್ ನ್ನೇ ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಆಘಾತ: ಅಖಿಲೇಶ್ ಯಾದವ್

ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
Uttar Pradesh CM Yogi Adityanath (L) and Samajwadi Party president Akhilesh Yadav
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್- ಅಖಿಲೇಶ್ ಯಾದವ್online desk
Updated on

ಲಖನೌ: ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿರುವುದಕ್ಕೆ ಅ.1 ವರೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿರುವುದರ ಬಗ್ಗೆ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ.

ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

"ಬುಲ್ಡೋಜಿಂಗ್" ಚಿಂತನೆಯನ್ನು ಕೆಡವಲಾಗಿದೆ ಎಂದು ಹೇಳಿರುವ ಅಖಿಲೇಶ್ ಯಾದವ್, ಬುಲ್ಡೋಜರ್ ಹೆಸರನ್ನು ಬದಲಾಯಿಸಬಹುದೇ? ಎಂದು ಕೇಳಿದ್ದಾರೆ.

Uttar Pradesh CM Yogi Adityanath (L) and Samajwadi Party president Akhilesh Yadav
'ಬುಲ್ಡೋಜರ್ ನ್ಯಾಯ'ಕ್ಕೆ ಸುಪ್ರೀಂ ಕೋರ್ಟ್ ತಡೆ: ಅಕ್ಟೋಬರ್ 1ರವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಖಡಕ್ ಆದೇಶ!

ಬುಲ್ಡೋಜರ್ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದೆ. ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅಲ್ಲದೆ ಕಾನೂನು ಪ್ರಕ್ರಿಯೆಯಂತೆ ಮಾತ್ರ ಅತಿಕ್ರಮಣ ತೆಗೆಯಬೇಕು ಎಂದು ಆದೇಶಿಸಿದೆ.

ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಯಾದವ್, ಎಕ್ಸ್‌ ಪೋಸ್ಟ್‌ನಲ್ಲಿ, ಆದಿತ್ಯನಾಥ್ ಅವರ ಹೆಸರನ್ನು ಉಲ್ಲೇಖಿಸದೆಯೇ ವಾಗ್ದಾಳಿ ನಡೆಸಿದ್ದಾರೆ ಮತ್ತು "ನ್ಯಾಯದ ಸುಪ್ರೀಂ ಆದೇಶವು ಬುಲ್ಡೋಜರ್ ನ್ನು ಮಾತ್ರವಲ್ಲದೆ ಬುಲ್ಡೋಜರ್ ಅನ್ನು ದುರುಪಯೋಗಪಡಿಸಿಕೊಂಡವರ ವಿನಾಶಕಾರಿ ರಾಜಕೀಯವನ್ನೂ ಬದಿಗೊತ್ತಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com