ಹಿಂದಿನ ಜಗನ್ ಸರ್ಕಾರದಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಕೆ; ಸಿಎಂ ಚಂದ್ರಬಾಬು ನಾಯ್ಡು

ಹಿಂದಿನ ಜಗನ್ ಸರ್ಕಾರ ತಿರುಮಲ ಪ್ರಸಾದ ಕಲಬೆರಕೆ ಮಾಡುವ ಮೂಲಕ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದು ಅಪವಿತ್ರಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಎನ್ ಚಂದ್ರಬಾಬು ನಾಯ್ಡು
ಎನ್ ಚಂದ್ರಬಾಬು ನಾಯ್ಡು
Updated on

ವಿಜಯವಾಡ: ಹಿಂದಿನ ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಸರ್ಕಾರದ ಬಗ್ಗೆ ಹಲವು ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಈ ಬಾರಿ ಸ್ವತಃ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೇ ಹೊಸ ಗಂಭೀರ ಆರೋಪ ಮಾಡಿದ್ದು ಭಾರೀ ಸಂಚಲನ ಮೂಡಿಸಿದೆ. ಅದೆಂದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಡ್ಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸುತ್ತಿದ್ದರು ಭಾರೀ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.

ಎನ್‌ಡಿಎ ಸಮ್ಮಿಶ್ರ ಸರ್ಕಾರ ರಚನೆಯಾಗಿ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳಗಿರಿಯ ಸಿಕೆ ಕನ್ವೆನ್ಷನ್ ಹಾಲ್‌ನಲ್ಲಿ ಎನ್‌ಡಿಎ ಮೈತ್ರಿಕೂಟದ ಶಾಸಕರು, ಸಂಸದರು ಮತ್ತು ಎಂಎಲ್‌ಸಿಗಳ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಹಿಂದಿನ ಜಗನ್ ಸರ್ಕಾರ ತಿರುಮಲ ಪ್ರಸಾದ ಕಲಬೆರಕೆ ಮಾಡುವ ಮೂಲಕ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದು ಅಪವಿತ್ರಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಸಾಮಾನ್ಯವಾಗಿ ತಿರುಮಲ ಲಡ್ಡು ಪ್ರಸಾದಕ್ಕೆ ಶುದ್ಧ ಹಸುವಿನ ತುಪ್ಪ ಬಳಸಬೇಕು ಆದರೆ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುವ ಮೂಲಕ ವೆಂಕಟೇಶ್ವರ ಸ್ವಾಮಿಗೆ ಅವಮಾನ ಮಾಡಿದ್ದಾರೆ. ನಮ್ಮ ಸರ್ಕಾರ ಬಂದ ಬಳಿಕ ಎಲ್ಲ ಗುಣಮಟ್ಟದ ಪದಾರ್ಥಗಳೊಂದಿಗೆ ಲಡ್ಡು ಪ್ರಸಾದವನ್ನು ತಯಾರಿಸುತ್ತಿದ್ದೇವೆ ಎಂದಿದ್ದಾರೆ.

ಜಗನ್ ಅಕ್ರಮದ ಬಗ್ಗೆ ತನಿಖೆ: ಕಳೆದ ವರ್ಷಗಳಲ್ಲಿ ವೈಎಸ್‌ಆರ್‌ಸಿಪಿ ಸರ್ಕಾರ ಹಲವು ಅಕ್ರಮಗಳನ್ನು ಮಾಡಿದೆ. ಇಂತಹ ತಪ್ಪು ಮಾಡಿ ಹಣ ವಸೂಲಿ ಮಾಡಿದವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದರು.

ತಮ್ಮ ಸರ್ಕಾರದಲ್ಲಿ ಅಣ್ಣಾ ಕ್ಯಾಂಟೀನ್ ರದ್ದು ಮಾಡುವ ಮೂಲಕ ಜಗನ್ ಕೆಟ್ಟ ಕೆಲಸ ಮಾಡಿದ್ದಾರೆ. ಜಗನ್ ಆಡಳಿತಾವಧಿಯಲ್ಲಿ ಅನೇಕ ಭ್ರಷ್ಟಾಚಾರವನ್ನು ಮಾಡಿದ್ದಾರೆ. ತಪ್ಪು ಮಾಡಿದವರನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು. ಇದೇ ವೇಳೆ ನಮ್ಮ ಸರ್ಕಾರದಲ್ಲಿ ಒಂದೇ ಒಂದು ಅಂತಹ ತಪ್ಪುಗಳಾಗಲು ಬಿಡುವುದಿಲ್ಲ. ಎಲ್ಲರೂ ಜಾಗರೂಕರಾಗಿರಬೇಕು ಎಂದು ಪಕ್ಷದ ಶಾಸಕರಿಗೆ ಕಿವಿಮಾತು ಹೇಳಿದರು.

ತಿರುಮಲ ಪ್ರಸಾದ ಕುರಿತು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ಖಂಡಿಸಿದ ವೈಎಸ್‌ಆರ್‌ಸಿ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ, ವೈಎಸ್‌ಆರ್‌ಸಿ ಆಡಳಿತದಲ್ಲಿ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಗಳು) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಚಂದ್ರಬಾಬು ನಾಯ್ಡು ಅವರು ತಿರುಮಲದ ಪಾವಿತ್ರ್ಯತೆಯನ್ನು ತೀವ್ರವಾಗಿ ಹಾಳು ಮಾಡಿದ್ದಾರೆ. ಕೋಟ್ಯಂತರ ಹಿಂದೂಗಳ ನಂಬಿಕೆ. ತಿರುಮಲ ಪ್ರಸಾದದ ಬಗ್ಗೆ ಅವರ ಹೇಳಿಕೆಗಳು ಅತ್ಯಂತ ದುರುದ್ದೇಶಪೂರಿತವಾಗಿವೆ. ಯಾವುದೇ ವ್ಯಕ್ತಿ ಅಂತಹ ಮಾತುಗಳನ್ನು ಮಾತನಾಡುವುದಿಲ್ಲ ಅಥವಾ ಅಂತಹ ಆರೋಪಗಳನ್ನು ಮಾಡುವುದಿಲ್ಲ ಎಂದಿದ್ದಾರೆ.

ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವುದೇ ಹಂತಕ್ಕೆ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭಕ್ತರ ನಂಬಿಕೆಯನ್ನು ಬಲಪಡಿಸಲು, ನಾನು ನನ್ನ ಕುಟುಂಬದೊಂದಿಗೆ ತಿರುಮಲ ಪ್ರಸಾದದ ಬಗ್ಗೆ ಸರ್ವೇಶ್ವರನ ಮುಂದೆ ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಚಂದ್ರಬಾಬು ತಮ್ಮ ಕುಟುಂಬದೊಂದಿಗೆ ಅದೇ ರೀತಿ ಮಾಡಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com