ಜಮ್ಮು-ಕಾಶ್ಮೀರ: ಕಥುವಾದಲ್ಲಿ ಸ್ಕೀಡ್ ಆಗಿ ಕಣಿವೆಗೆ ಬಿದ್ದ ವಾಹನ; ಓರ್ವ ಯೋಧ ಹುತಾತ್ಮ, ಆರು ಮಂದಿಗೆ ಗಾಯ

ಮಚೇಡಿ-ಬಿಲ್ಲವರ್ ರಸ್ತೆಯ ಸುಕ್ರಲಾ ದೇವಿ ದೇವಸ್ಥಾನ ಬಳಿ ಶುಕ್ರವಾರ ಅಪಘಾತ ನಡೆದಿದೆ. ಯೋಧರು ದೂರದ ಪ್ರದೇಶವೊಂದರ ಗಸ್ತಿನಲ್ಲಿದ್ದಾಗ ಈ ಘಟನೆ ನಡೆದಿದೆ.
ಹುತಾತ್ಮ ಯೋಧನಿಗೆ ಶ್ರದ್ದಾಂಜಲಿ ಸಲ್ಲಿಸಿದ ರೈಸಿಂಗ್ ಸ್ಟಾರ್ ಕಾರ್ಪ್ಸ್
ಹುತಾತ್ಮ ಯೋಧನಿಗೆ ಶ್ರದ್ದಾಂಜಲಿ ಸಲ್ಲಿಸಿದ ರೈಸಿಂಗ್ ಸ್ಟಾರ್ ಕಾರ್ಪ್ಸ್
Updated on

ಜಮ್ಮು: ಯೋಧರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ರಸ್ತೆಯಲ್ಲಿ ಸ್ಕೀಡ್ ಆಗಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದು, ಇತರ ಆರು ಮಂದಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಮಚೇಡಿ-ಬಿಲ್ಲವರ್ ರಸ್ತೆಯ ಸುಕ್ರಲಾ ದೇವಿ ದೇವಸ್ಥಾನ ಬಳಿ ಶುಕ್ರವಾರ ಅಪಘಾತ ನಡೆದಿದೆ. ಯೋಧರು ದೂರದ ಪ್ರದೇಶವೊಂದರ ಗಸ್ತಿನಲ್ಲಿದ್ದಾಗ ಈ ಘಟನೆ ನಡೆದಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಏಳು ಸೈನಿಕರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪೈಕಿ ಓರ್ವ ಯೋಧ ರಾಮಕಿಶೋರ್ ಹುತಾತ್ಮರಾಗಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಹುತಾತ್ಮ ಯೋಧನಿಗೆ ಶ್ರದ್ದಾಂಜಲಿ ಸಲ್ಲಿಸಿದ ರೈಸಿಂಗ್ ಸ್ಟಾರ್ ಕಾರ್ಪ್ಸ್
ಕಾಶ್ಮೀರ: ಬಸ್ ಕಮರಿಗೆ ಬಿದ್ದು ಮೂವರು ಬಿಎಸ್‌ಎಫ್ ಯೋಧರು ಸಾವು, 12 ಸಿಬ್ಬಂದಿಗೆ ಗಾಯ

ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹುತಾತ್ಮ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಈ ಕರ್ತವ್ಯ ನಿರತ ಹುತಾತ್ಮ ಯೋಧನ ಘಟನೆ ದುರದೃಷ್ಟಕರವಾಗಿದ್ದು,ಅವರ ಅಕಾಲಿಕ ನಿಧನಕ್ಕೆ ವಿಷಾದಿಸುತ್ತೇವೆ. ಈ ಸಮಯದಲ್ಲಿ ಭಾರತೀಯ ಸೇನೆಯು ದುಃಖತಪ್ತ ಕುಟುಂಬದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಮತ್ತು ಅವರ ಬೆಂಬಲಕ್ಕೆ ಬದ್ಧವಾಗಿದೆ ಎಂದು ಫೋಸ್ಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com