ಮಗನ ಶಾಲೆ ಶುಲ್ಕ ಪಾವತಿಸಲು ಬೇಡುವ ಸ್ಥಿತಿ ಬಂದಿತ್ತು: ಬಂಧನದ ನಂತರದ ಸ್ಥಿತಿ ನೆನೆದ ಮನೀಷ್ ಸಿಸೋಡಿಯಾ

ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ತಮ್ಮನ್ನು ಪಕ್ಷದ ನಾಯಕ, ಅರವಿಂದ್ ಕೇಜ್ರಿವಾಲ್ ವಿರುದ್ಧ ಎತ್ತಿಕಟ್ಟಲು ಪ್ರಯತ್ನ ನಡೆದಿತ್ತು ಎಂದು ಮನೀಷ್ ಸಿಸೋಡಿಯಾ ಹೇಳಿದ್ದಾರೆ.
 Manish Sisodia
ಮನೀಶ್ ಸಿಸೋಡಿಯಾonline desk
Updated on

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮನೀಷ್ ಸಿಸೋಡಿಯಾ ತಮ್ಮ ಬಂಧನದ ನಂತರದ ಪರಿಸ್ಥಿತಿಯನ್ನು ನೆನೆಪಿಸಿಕೊಂಡಿದ್ದಾರೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ತಮ್ಮನ್ನು ಪಕ್ಷದ ನಾಯಕ, ಅರವಿಂದ್ ಕೇಜ್ರಿವಾಲ್ ವಿರುದ್ಧ ಎತ್ತಿಕಟ್ಟಲು ಪ್ರಯತ್ನ ನಡೆದಿತ್ತು ಎಂದು ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ನನ್ನನ್ನು ಸಿಲುಕಿಸಿದ್ದಾರೆ ಎಂದು ನನಗೆ ಹೇಳಲಾಯಿತು. ಕೇಜ್ರಿವಾಲ್ ಹೆಸರನ್ನು ಹೇಳಿದರೆ ನನ್ನನ್ನು ಪ್ರಕರಣಗಳಿಂದ ಹೊರತರುವುದಾಗಿ ಜೈಲಿನಲ್ಲಿದ್ದಾಗ ಹೇಳಿದ್ದರು ಎಂದು ಪಕ್ಷದ ಕಾರ್ಯಕ್ರಮ ಜನತಾ ಕೀ ಅದಾಲತ್ ನಲ್ಲಿ ಸಿಸೋಡಿಯಾ ಹೇಳಿದ್ದಾರೆ. ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಮತ್ತು ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ತಮ್ಮ ಪರವಾಗಿ ತೀರ್ಪು ನೀಡಿದ ನಂತರವೇ ಅವರು ಹುದ್ದೆಗೆ ಮರಳುತ್ತಾರೆ ಎಂದು ಸಿಸೋಡಿಯಾ ಹೇಳಿದ್ದಾರೆ. ಜನರ ತೀರ್ಪಿನ ನಂತರವೇ ದೆಹಲಿ ಸರ್ಕಾರದಲ್ಲಿ ಪಾತ್ರ ವಹಿಸುವುದಾಗಿ ಸಿಸೋಡಿಯಾ ಕೂಡ ಹೇಳಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಕೇಜ್ರಿವಾಲ್ ರಾಜೀನಾಮೆ ನೀಡುವುದಾಗಿ ಅಚ್ಚರಿಯ ಘೋಷಣೆ ಮಾಡಿದ್ದರು.

 Manish Sisodia
ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ; RSS ಮುಖ್ಯಸ್ಥರಿಗೆ ಐದು ಪ್ರಶ್ನೆ

ನನಗೆ ಬಿಜೆಪಿಗೆ ಸೇರುವಂತೆ ಆಹ್ವಾನ ಬಂದಿತ್ತು ಎಂದು ಹೇಳಿರುವ ಸಿಸೋಡಿಯಾ, ಆ ಅವಧಿಯಲ್ಲಿ ಎದುರಿಸಿದ ಸಮಸ್ಯೆಗಳನ್ನು ನೆನಪಿಸಿಕೊಂಡಿದ್ದಾರೆ. "2002 ರಲ್ಲಿ, ನಾನು ಪತ್ರಕರ್ತನಾಗಿದ್ದಾಗ, ನಾನು ₹ 5 ಲಕ್ಷ ಮೌಲ್ಯದ ಫ್ಲಾಟ್ ಖರೀದಿಸಿದೆ, ಅದನ್ನು ತೆಗೆದುಕೊಳ್ಳಲಾಯಿತು, ನನ್ನ ಖಾತೆಯಲ್ಲಿ ₹ 10 ಲಕ್ಷ ಇತ್ತು, ಅದನ್ನೂ ಸಹ ಬಿಡಲಿಲ್ಲ. ನನ್ನ ಮಗನ ಶುಲ್ಕವನ್ನು ಪಾವತಿಸಲು ನಾನು ಸಹಾಯಕ್ಕಾಗಿ ಬೇಡಿಕೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com