Tamil Nadu: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಆಯ್ಕೆ?; ಸುಳಿವು ಕೊಟ್ಟ ಸಿಎಂ ಸ್ಟಾಲಿನ್!

ಸಮಯ ಇನ್ನೂ ಪಕ್ವವಾಗಿಲ್ಲ. ಬದಲಾವಣೆ ಮಾತ್ರ ನಿರಂತರ ಕಾದು ನೋಡಿ. ರಾಜ್ಯ ಕ್ಯಾಬಿನೆಟ್ ನಲ್ಲಿ ಬದಲಾವಣೆಗಳಿರಲಿವೆ ಎಂದರು.
MK Stalin
ಎಂಕೆ ಸ್ಟಾಲಿನ್
Updated on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಂಗಳವಾರ ತಮ್ಮ ಪುತ್ರ ಹಾಗೂ ರಾಜ್ಯ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ರಾಜ್ಯ ಸಚಿವ ಸಂಪುಟ ಪುನಾರಚನೆ ಮತ್ತು ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಮಾಡುವ ಸಾಧ್ಯತೆಯ ಕುರಿತು ಅವರ ಇತ್ತೀಚಿನ ಟೀಕೆಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ಟಾಲಿನ್, 'ಸ್ಟಾಲಿನ್ ಅವರು ಯಾವುದೇ ನಿರಾಶೆಯಾಗುವುದಿಲ್ಲ. ಆದರೆ ಬದಲಾವಣೆ ಇರುತ್ತದೆ ಎಂದು ಹೇಳಿದ್ದಾರೆ.

ತಮ್ಮ ವಿಧಾನಸಭಾ ಕ್ಷೇತ್ರ ಕೊಳತ್ತೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಕೆ ಸ್ಟಾಲಿನ್, 'ಸ್ಟಾಲಿನ್, "ಬೇಡಿಕೆ ಜೋರಾಗುತ್ತಿದೆ. ಆದರೆ ಅದಕ್ಕೆ ಸಮಯ ಇನ್ನೂ ಪಕ್ವವಾಗಿಲ್ಲ. ಬದಲಾವಣೆ ಮಾತ್ರ ನಿರಂತರ ಕಾದು ನೋಡಿ. ರಾಜ್ಯ ಕ್ಯಾಬಿನೆಟ್ ನಲ್ಲಿ ಬದಲಾವಣೆಗಳಿರಲಿವೆ ಎಂದರು.

ಅಂತೆಯೇ ತಮ್ಮ ವಿದೇಶಿ ಭೇಟಿಗಳ ಸಂದರ್ಭದಲ್ಲಿ ಆಕರ್ಷಿತವಾದ ಹೂಡಿಕೆಗಳ ಕುರಿತು ಶ್ವೇತಪತ್ರ ಹೊರಡಿಸಲು ವಿರೋಧ ಪಕ್ಷಗಳ ಬೇಡಿಕೆಯ ಬಗ್ಗೆ ಕೇಳಿದಾಗ, ಸ್ಟಾಲಿನ್, “ತಮ್ಮ ಆಡಳಿತದ ಅವಧಿಯಲ್ಲಿ ಹೊರಡಿಸಲಾದ ಶ್ವೇತಪತ್ರಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಇದಕ್ಕೆ ವಿವರವಾದ ಉತ್ತರವನ್ನು ನೀಡಿದ್ದು, ಇದು ಸ್ವತಃ ಶ್ವೇತಪತ್ರವನ್ನು ಹೋಲುತ್ತದೆ ಎಂದು ಹೇಳಿದರು.

ಹಿರಿಯರಿಂದ ಗ್ರೀನ್ ಸಿಗ್ನಲ್

ಇನ್ನು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಮಾಡುವ ಸಂಬಂಧ ಮುಖ್ಯಮಂತ್ರಿ ಸ್ಟಾಲಿನ್ ಇತ್ತೀಚೆಗೆ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಉಪ ಪ್ರಧಾನ ಕಾರ್ಯದರ್ಶಿ ಎ.ರಾಜಾ, ಖಜಾಂಚಿ ಡಿ.ಆರ್.ಬಾಲು, ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ, ಸಂಸದ ತಿರುಚ್ಚಿ ಶಿವ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಎಲ್ಲ ಹಿರಿಯ ನಾಯಕರು ಉಪಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಅವರ ಆಯ್ಕೆ ಮಾಡುವ ವಿಚಾರಕ್ಕೆ ಬೆಂಬಲಿಸಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಟಾಲಿನ್ ದೆಹಲಿಗೆ ತೆರಳುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರಂತೆ.

ಸ್ಟಾಲಿನ್ ದೆಹಲಿ ಭೇಟಿಯ ನಂತರ ಯಾವಾಗ ಬೇಕಾದರೂ ಉದಯನಿಧಿ ಉಪಮುಖ್ಯಮಂತ್ರಿ ಘೋಷಣೆ ಬರಬಹುದು ಎನ್ನಲಾಗ್ತಿದೆ. ಅದರಂತೆ ದೆಹಲಿಯಿಂದ ವಾಪಸಾದ ನಂತರ ತಮಿಳುನಾಡಿನ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಸಿಎಂ ಸ್ಟಾಲಿನ್ 2 ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಪುನಾರಚನೆ ಪ್ರತ್ಯೇಕವಾಗಿ ನಡೆಯಲಿದ್ದು, ಅದಕ್ಕೂ ಮುನ್ನ ಉಪಮುಖ್ಯಮಂತ್ರಿ ಹುದ್ದೆಯ ಅಧಿಸೂಚನೆ ಹೊರ ಬರಲಿದೆ ಎನ್ನಲಾಗಿದೆ.

MK Stalin
ಬಿಜೆಪಿಯೊಂದಿಗೆ ಡಿಎಂಕೆ ರಹಸ್ಯ ಮೈತ್ರಿ: ಊಹಾಪೋಹ ಕುರಿತು ಸಿಎಂ ಸ್ಟಾಲಿನ್ ಹೇಳಿದ್ದು ಹೀಗೆ...

ಎಐಎಡಿಎಂಕೆ ಕಿಡಿ

ಇನ್ನು ಉದಯನಿಧಿ ಸ್ಟಾಲಿನ್ ಗೆ ಡಿಸಿಎಂ ಹುದ್ದೆ ನೀಡುವ ಕುರಿತ ಸುದ್ದಿಗಳ ನಡುವೆಯೇ ಆಡಳಿತಾರೂಢ ಡಿಎಂಕೆ ವಿರುದ್ಧ ಎಐಎಡಿಎಂಕೆ ಕಿಡಿಕಾರಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಐಎಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿ.ಜಯಕುಮಾರ್, ‘ಹಲವು ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರು ವಂಶಪಾರಂಪರ್ಯ ರಾಜಕಾರಣ ಮಾಡಲು ಡಿಎಂಕೆ ಶಂಕರಮಠ ಅಲ್ಲ ಎಂದು ಹೇಳಿದ್ದರು. ಆದರೆ ಅವರೇ ಬಳಿಕ ಪಕ್ಷಕ್ಕೆ ಎಂಕೆ ಸ್ಟಾಲಿನ್ ಅವರನ್ನು ಕರೆತಂದರು.

ಅದೇ ಮಾದರಿಯಲ್ಲಿ ಕಳೆದ ಮೂರು ವರ್ಷಗಳಿಂದ ಉದಯನಿಧಿ ಸ್ಟಾಲಿನ್ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾಹಿತಿಯನ್ನು ಬಿತ್ತರಿಸುತ್ತಿದ್ದು, ಯಾವುದೇ ನಿರಾಸೆ ಇಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ. ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿಯ ಪೂರ್ವಾಗ್ರಹವಾಗಿದ್ದು, ಡಿಎಂಕೆಗಾಗಿ ಅಗಾಧವಾದ ಕೆಲಸ ಮಾಡಿದ ಹಲವಾರು ಹಿರಿಯರಿದ್ದಾರೆ ಅವರು ಈ ಹುದ್ದೆಗೆ ಅರ್ಹರಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com