ಮಧ್ಯಪ್ರದೇಶ: ಮಹಾಕಾಳೇಶ್ವರ ದೇವಸ್ಥಾನದ ಎದುರಿನ ಗೋಡೆ ಕುಸಿದು ಇಬ್ಬರು ಸಾವು!

ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ದೇವಾಲಯದ ಎದುರಿನ ಗೋಡೆ ಕುಸಿತ
ದೇವಾಲಯದ ಎದುರಿನ ಗೋಡೆ ಕುಸಿತ
Updated on

ಉಜ್ಜಯಿನಿ: ಶುಕ್ರವಾರ ಸಂಜೆ ಸುರಿದ ಭಾರಿ ಮಳೆಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದ ಎದುರಿನ ಮಹಾರಾಜವಾಡ ಶಾಲೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ದೇವಾಲಯದ ಎದುರಿನ ಗೋಡೆ ಕುಸಿತ
Video: ಭಾರಿ ಮಳೆ; ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿತ

ದೇವಸ್ಥಾನದಲ್ಲಿ ಸಂಜೆಯ ಆರತಿಗೆ ಮುನ್ನವೇ ಈ ಅವಘಡ ಸಂಭವಿಸಿದೆ. ಗೋಡೆ ಕುಸಿತದಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಇಂದೋರ್‌ನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com