ಭ್ರಷ್ಟಾಚಾರ, ಭಯೋತ್ಪಾದನೆ, ಪ್ರತ್ಯೇಕತಾವಾದ ಮುಕ್ತ ಸರ್ಕಾರಕ್ಕೆ ಜಮ್ಮು-ಕಾಶ್ಮೀರ ಜನತೆ ಎದುರು ನೋಡುತ್ತಿದ್ದಾರೆ: ಪ್ರಧಾನಿ ಮೋದಿ

ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಭಾರಿ ಮತದಾನವಾಗಿದೆ. ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ರಚಿಸುವುದು ಖಚಿತ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಜನರು ಶಾಂತಿ, ಸುವ್ಯವಸ್ಥೆ ಮತ್ತು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕೆ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಗಳಿಂದ ಮುಕ್ತ ಸರ್ಕಾರಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಮ್ಮುವಿನ ಎಂಎಎಂ ಕ್ರೀಡಾಂಗಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಧಾನಸಭಾ ಚುನಾವಣೆಯು ಮುಂದಿನ ಸರ್ಕಾರವನ್ನು ನಿರ್ಧರಿಸುವ ಐತಿಹಾಸಿಕ ಅವಕಾಶವನ್ನು ಜಮ್ಮುವಿನ ಜನತೆಗೆ ನೀಡಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಿಜೆಪಿಯನ್ನು ಆಯ್ಕೆ ಮಾಡಬೇಕು ಎಂದು ಮೋದಿ ಹೇಳಿದರು.

ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಭಾರಿ ಮತದಾನವಾಗಿದೆ. ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ರಚಿಸುವುದು ಖಚಿತ ಎಂದು ಹೇಳಿದರು.

ಇದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿಯವರ ಮೂರನೇ ಭೇಟಿ ಮತ್ತು ಹದಿನೈದು ದಿನಗಳಲ್ಲಿ ನಾಲ್ಕನೇ ಚುನಾವಣಾ ರ್ಯಾಲಿಯಾಗಿದೆ.

ಅವರು ಮೊದಲ ಹಂತದ ಚುನಾವಣೆಗೆ ನಾಲ್ಕು ದಿನಗಳ ಮೊದಲು ಸೆಪ್ಟೆಂಬರ್ 14 ರಂದು ದೋಡಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮತ್ತು ಎರಡನೇ ಹಂತದ ಚುನಾವಣೆಯ ಪೂರ್ವಭಾವಿಯಾಗಿ ಸೆಪ್ಟೆಂಬರ್ 19 ರಂದು ಶ್ರೀನಗರ ಮತ್ತು ಕತ್ರಾದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

ಜಮ್ಮು ಪ್ರದೇಶದಲ್ಲಿ 24 ಮತ್ತು ಕಾಶ್ಮೀರದ 16 ಜಿಲ್ಲೆಗಳ ಏಳು ಜಿಲ್ಲೆಗಳ ಕೊನೆಯ 40 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಸಂಜೆ ಪ್ರಚಾರ ಅಂತ್ಯಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com