ಹರಿಯಾಣ: ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿದಂತೆ 8 ಬಂಡಾಯ ನಾಯಕರು ಬಿಜೆಪಿಯಿಂದ ಉಚ್ಛಾಟನೆ!

ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಕೇಸರಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಂಡೀಗಢ: ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

ಈ ನಾಯಕರನ್ನು ತಕ್ಷಣವೇ ಜಾರಿಗೆ ಬರುವಂತೆ ಆರು ವರ್ಷಗಳ ಅವಧಿಗೆ ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಉಚ್ಚಾಟಿಸಿದ್ದಾರೆ ಎಂದು ಹರಿಯಾಣ ಬಿಜೆಪಿ ಹೇಳಿದೆ.

ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಕೇಸರಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸೇರುವ ಮುನ್ನ ಚೌಟಾಲಾ ವಿಧಾನಸಭೆಯ ಸದಸ್ಯತ್ವವನ್ನು ತೊರೆದಿದ್ದರು. ಅವರು ಹಿಸಾರ್‌ನಿಂದ ಸಂಸತ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.

ಸಾಂದರ್ಭಿಕ ಚಿತ್ರ
ಹರಿಯಾಣ: ಬಿಜೆಪಿಗೆ ಬಂಡಾಯದ ಬಿಸಿ; ಟಿಕೆಟ್ ವಂಚಿತ ಸಚಿವ ರಂಜಿತ್ ಚೌತಾಲಾ, ಶಾಸಕ ಲಕ್ಷ್ಮಣ್ ನಾಪಾ ರಾಜೀನಾಮೆ

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಸತತ ಮೂರನೇ ಅವಧಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com