ನವದೆಹಲಿ: ಗರ್ಭಕಂಠ ಕ್ಯಾನ್ಸರ್ ತಡೆಗಾಗಿ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಮಧ್ಯಂತರ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ಈ ಘೋಷಣೆಯನ್ನು ಮಾಡಿದರು. ನಮ್ಮ ಸರ್ಕಾರ ಗರ್ಭಕಂಠ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಲಸಿಕೆ ಕ್ರಮಕ್ಕೆ ಮುಂದಾಗಲಿದೆ. ತಾಯಿ ಮಕ್ಕಳ ಆರೈಕೆಗೆ ವಿವಿಧ ಯೋಜನೆಗಳನ್ನು ಒಂದು ಸಮಗ್ರ ಕಾರ್ಯಕ್ರಮದ ಅಡಿಯಲ್ಲಿ ತರಲಾಗುವುದು. ಸಕ್ಷಮ ಅಂಗನವಾಡಿ ಅಡಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸುವ ಮತ್ತು ಪೋಷಣ್ 2.0 ಮೂಲಕ ಮಕ್ಕಳ ಆರೈಕೆ ಮತ್ತು ಅಭಿವೃದ್ಧಿ ಸೇರಿದಂತೆ ಸುಧಾರಿತ ಪೌಷ್ಟಿಕಾಂಶ ವಿತರಣೆಗಾಗಿ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅನೇಕ ಯುವ ಜನರು ವೈದ್ಯರಾಗುವ ಮಹಾತ್ವಕಾಂಕ್ಷೆಯನ್ನು ಹೊಂದಿದ್ದಾರೆ. ಅವರ ಈ ಕನಸಿಗಾಗಿ ನಮ್ಮ ಸರ್ಕಾರವು ಪ್ರಸ್ತುತ ಇರುವ ಆಸ್ಪತ್ರೆಗಳ ಮೂಲಸೌಕರ್ಯವನ್ನು ಬಳಕೆ ಮಾಡಿಕೊಂಡು ಮತ್ತಷ್ಟು ಹೆಚ್ಚಿನ ವೈದ್ಯಕೀಯ ಕಾಲೇಜು ನಿರ್ಮಾಣದ ಯೋಜನೆ ಹೊಂದಿದೆ. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಲಾಗುವುದು. ಇದು ಅದಕ್ಕೆ ಪೂರಕವಾಗುವ ಅಂಶಗಳ ಮೇಲ್ವಿಚಾರಣೆ ನಡೆಸಿ ಶಿಫಾರಸುಗಳನ್ನು ನೀಡಲಿದೆ ಎಂದು ತಿಳಿಸಿದರು.
ಆರೋಗ್ಯ ಕ್ಷೇತ್ರಕ್ಕೆ ಸಿಕ್ಕ ಪ್ರಮುಖ ಕೊಡುಗೆಗಳು ಇಂತಿವೆ...
Advertisement