ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ, ಬಾಂಬ್ ಸ್ಫೋಟ; 4 ನಾಗರಿಕರು ನಾಪತ್ತೆ!

ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಸಮಯದಲ್ಲಿ ನಾಲ್ವರು ನಾಪತ್ತೆಯಾಗಿದ್ದು ಪೊಲೀಸರು ಅವರಿಗಾಗಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಇಂಫಾಲ: ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಸಮಯದಲ್ಲಿ ನಾಲ್ವರು ನಾಪತ್ತೆಯಾಗಿದ್ದು ಪೊಲೀಸರು ಅವರಿಗಾಗಿ ಹುಡುಕಾಟದಲ್ಲಿ ನಿರತರಾಗಿದ್ದಾರೆ. 

ಮಾಹಿತಿ ಪ್ರಕಾರ, ಕುಂಬಿ ವಿಧಾನಸಭಾ ಕ್ಷೇತ್ರದ ನಾಲ್ವರು ಬಿಷ್ಣುಪುರ ಮತ್ತು ಚುರಚಂದಪುರ ಜಿಲ್ಲೆಗಳ ಪಕ್ಕದ ಬೆಟ್ಟಗಳ ಬಳಿ ಮರ ಸಂಗ್ರಹಿಸಲು ಹೋಗಿದ್ದರು. ಆದರೆ ಅವರು ಹಿಂತಿರುಗಿಲ್ಲ. ನಾಪತ್ತೆಯಾಗಿರುವವರನ್ನು ದಾರಾ ಸಿಂಗ್, ಇಬೊಮ್ಚಾ ಸಿಂಗ್, ರೊಮೈನ್ ಸಿಂಗ್ ಮತ್ತು ಆನಂದ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಭಯೋತ್ಪಾದಕರ ವಶದಲ್ಲಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಮತ್ತು ಕೇಂದ್ರ ಪಡೆಗಳಿಂದ ಸಹಾಯವನ್ನು ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಉಗ್ರರು ಗುಂಡಿನ ದಾಳಿ ನಡೆಸಿದ್ದು ಬಿಷ್ಣುಪುರ್ ಜಿಲ್ಲೆಯ ಹಾತಕ್ ಗ್ರಾಮದಲ್ಲಿ ಬಾಂಬ್ ದಾಳಿ ನಡೆದಿದೆ. 100ಕ್ಕೂ ಹೆಚ್ಚು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಪ್ರತಿದಾಳಿ ನಡೆಸಿದರು. ಯಾರೂ ಗಾಯಗೊಂಡಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ.

2023ರ ಮೇ 3ರಂದು ಮಣಿಪುರದಲ್ಲಿ ಜಾತಿ ಹಿಂಸಾಚಾರ ಭುಗಿಲೆದ್ದಿತು. ಅದರ ನಂತರ ಇದುವರೆಗೆ 180ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ನೂರಾರು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದಿಂದ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಿಗೂ ಹಾನಿಯಾಗಿದೆ. ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೈಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿದಾಗ ಹಿಂಸಾಚಾರ ಪ್ರಾರಂಭವಾಯಿತು. ಹಿಂಸಾಚಾರದ ಮೊದಲು, ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ ಬಗ್ಗೆ ಉದ್ವಿಗ್ನತೆ ಇತ್ತು. ಇದು ಹಲವಾರು ಸಣ್ಣ ಪ್ರತಿಭಟನೆಗೆ ಕಾರಣವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com