ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಆರಂಭ

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಮಣಿಪುರ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಜ.14 ರಿಂದ ಮಣಿಪುರ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ. 

ಇದು ರಾಜಕೀಯ ರ್ಯಾಲಿ ಆಗಿದ್ದು ಚುನಾವಣೆಗೆ ಸಂಬಂಧ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಣಿಪುರದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಭಾರತ್ ಜೋಡೋ ನ್ಯಾಯ ಯಾತ್ರೆ, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತದ್ದಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು ಯಾತ್ರೆಯ ಪ್ರಾರಂಭದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ. 

“ಇದು ಸೈದ್ಧಾಂತಿಕ ಯಾತ್ರೆ, ಚುನಾವಣಾ ಯಾತ್ರೆಯಲ್ಲ. ಇದೊಂದು ರಾಜಕೀಯ ರ್ಯಾಲಿಯಾಗಿದ್ದು, ರಾಜಕೀಯ ಉದ್ದೇಶದಿಂದ ರಾಜಕೀಯ ಪಕ್ಷವೊಂದು ನಡೆಸುತ್ತಿದೆ. ಸಂವಿಧಾನ, ಸಂವಿಧಾನದ ಪೀಠಿಕೆ, ತತ್ವಗಳು-ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ರಕ್ಷಿಸುವುದು ನಮ್ಮ ರಾಜಕೀಯ ಉದ್ದೇಶವಾಗಿದೆ ಎಂದು ರಮೇಶ್ ಹೇಳಿದ್ದಾರೆ. 

ಯಾತ್ರೆಯ ಆರಂಭಿಕ ಹಂತವಾಗಿ ಮಣಿಪುರವನ್ನು ಉದ್ದೇಶಪೂರ್ವಕ ಆಯ್ಕೆಯಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಕಾಂಗ್ರೆಸ್ ವಿವಿಧ ಆಯ್ಕೆಗಳನ್ನು ಪರಿಗಣಿಸಿದೆ ಮತ್ತು ಅಂತಿಮವಾಗಿ, “ಇಲ್ಲಿ ಏನಾಯಿತು ಎಂಬುದರ ಬಗ್ಗೆ ನಮ್ಮ ಕಾಳಜಿಯ ಪ್ರತಿಬಿಂಬವಾಗಿ ಮಣಿಪುರದಿಂದ ಪ್ರಾರಂಭಿಸಲು ನಿರ್ಧರಿಸಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮಣಿಪುರದ ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಿಲ್ಲ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com