ರಾಮಮಂದಿರ ಉದ್ಘಾಟನೆ ನೇರ ಪ್ರಸಾರ: ತ.ನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಚಾಟಿ; ಹಿಂದೂಗಳ ಮನವಿ ತಿರಸ್ಕರಿಸದಂತೆ 'ಸುಪ್ರೀಂ' ಸೂಚನೆ

ದೇಶಾದ್ಯಂತ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಜನತೆ ಉತ್ಸಾಹದಿಂದ ಕಣ್ತುಂಬಿಕೊಳ್ಳುತ್ತಿದ್ದರೆ ಇತ್ತ ತಮಿಳುನಾಡು ಸರ್ಕಾರ ಮಾತ್ರ ತನ್ನ ಧ್ವಂದ್ವ ನಿರ್ಣಯದಿಂದ ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ ನಿಂದ ಚಾಟಿ ಬೀಸಿಸಿಕೊಂಡಿದೆ.
ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಸಿದ್ಧತೆ
ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಸಿದ್ಧತೆ
Updated on

ನವದೆಹಲಿ: ದೇಶಾದ್ಯಂತ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಜನತೆ ಉತ್ಸಾಹದಿಂದ ಕಣ್ತುಂಬಿಕೊಳ್ಳುತ್ತಿದ್ದರೆ ಇತ್ತ ತಮಿಳುನಾಡು ಸರ್ಕಾರ ಮಾತ್ರ ತನ್ನ ಧ್ವಂದ್ವ ನಿರ್ಣಯದಿಂದ ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ ನಿಂದ ಚಾಟಿ ಬೀಸಿಸಿಕೊಂಡಿದೆ.

ಹೌದು.. ತಮಿಳುನಾಡು ಸರ್ಕಾರ ಲೈವ್ ಪ್ರಸಾರ ಹಾಗೂ ಸಾರ್ವಜನಿಕವಾಗಿ ರಾಮದೇವರ ಪೂಜೆಯನ್ನು ಮಾಡುವುದಕ್ಕೆ ತಡೆಯಲು ಯತ್ನಿಸಿತ್ತು. ಪೊಲೀಸರಿಗೆ ಮೌಖಿಕ ಆದೇಶ ನೀಡುವ ಮೂಲಕ ಜನರಿಗೆ ಬೆದರಿಕೆ ಹಾಕುವ ಕೆಲಸ ಮಾಡಿದೆ ಎನ್ನಲಾಗಿದೆ. ರಾಮ ಮಂದಿರ (Ram Mandir) ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಸ್ಥಳೀಯವಾಗಿ ರಾಮ ದೇವರ ಪೂಜೆಯನ್ನು ತಡೆಯಲು ಯತ್ನಿಸಿದ್ದ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧ ಮದ್ರಾಸ್​ ಹೈಕೋರ್ಟ್​ ಚಾಟಿ ಬೀಸಿದ್ದು, ಎಂಕೆ ಸ್ಟಾಲಿನ್​ ನೇತೃತ್ವದ ಸರ್ಕಾರಕ್ಕೆ ರಾಮ ಭಕ್ತಿಯನ್ನು ತಡೆಯುವ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದೆ.

ಇಂತಹ ಲೈವ್ ಟೆಲಿಕಾಸ್ಟ್‌ಗೆ ಅನುಮತಿ ಕೋರುವ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಾರೆ ಮತ್ತು ಕಾನೂನಿನ ಪ್ರಕಾರ ವ್ಯವಹರಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅರ್ಜಿಗಳನ್ನು ತಿರಸ್ಕರಿಸಿದರೆ, ಅಂತಹ ಯಾವುದೇ ವಿನಂತಿಗಳನ್ನು ತಿರಸ್ಕರಿಸಲು ಕಾರಣಗಳನ್ನು ನೀಡಬೇಕು. ಯಾವುದೇ ಮೌಖಿಕ ಸೂಚನೆಗಳನ್ನು ಆಧರಿಸಿರದೆ, ಪವಿತ್ರಾಧಿಕಾರ ಸಮಾರಂಭದ ನೇರ ಪ್ರಸಾರವನ್ನು 'ನಿಷೇಧಿಸುವ' ಕಾನೂನು ಪ್ರಕಾರವಾಗಿ ಕಾರ್ಯನಿರ್ವಹಿಸುವಂತೆ ತಮಿಳುನಾಡು ರಾಜ್ಯ ಅಧಿಕಾರಿಗಳಿಗೆ ನ್ಯಾಯಾಲಯ ಹೇಳಿದೆ.

ಹಿಂದೂಗಳ ಮನವಿ ತಿರಸ್ಕರಿಸದಂತೆ ಸುಪ್ರೀಂ ತಾಕೀತು
ಅಂತೆಯೇ ರಾಮ ಭಕ್ತರು ಸುಪ್ರೀಂ ಕೋರ್ಟ್ ಹಾಗೂ ಮದ್ರಾಸ್ ಹೈಕೋರ್ಟ್​ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್​ ಈ ಕುರಿತು ಸರ್ಕಾರಕ್ಕೆ ನೋಟಿಸ್​ ನೀಡಿದ್ದರೆ, ಮದ್ರಾಸ್ ಹೈಕೋರ್ಟ್​ ಮಾತಿನೇಟುಕೊಟ್ಟಿದೆ.  ತಮಿಳುನಾಡಿನಾದ್ಯಂತ ಇರುವ ದೇವಾಲಯಗಳಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದ ನೇರ ಪ್ರಸಾರವನ್ನು ನಿಷೇಧಿಸುವ ಮೌಖಿಕ ಆದೇಶವನ್ನು ಪಾಲಿಸಲು ಯಾರೂ ಬದ್ಧರಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ಅಲ್ಲದೆ ರಾಮಮಂದಿರ ಪ್ರಾಣ ಪ್ರತಿಷ್ಠಾವನ್ನು ನೇರಪ್ರಸಾರ ಮಾಡುವ ಮನವಿಯನ್ನು ತಿರಸ್ಕರಿಸದಂತೆ ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶದಲ್ಲಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

"ಎಲ್ಲಾ ನಿರಾಕರಣೆಯ ಆದೇಶಗಳು ಕಾರಣಗಳನ್ನು ತೋರಿಸಬೇಕು" ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಈ ನಿಟ್ಟಿನಲ್ಲಿ ಡೇಟಾವನ್ನು ನಿರ್ವಹಿಸಲು ತಮಿಳುನಾಡು ರಾಜ್ಯ ಸರ್ಕಾರವನ್ನು ಕೇಳಿದೆ.

ರಾಮ ಮಂದಿರದ ಮಹಾಮಸ್ತಕಾಭಿಷೇಕ ಸಮಾರಂಭ ಯಾವುದೇ ರೀತಿಯ ನೇರ ಪ್ರಸಾರಕ್ಕೆ ಅವಕಾಶ ನೀಡದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿರುವ ಮೌಖಿಕ ಆದೇಶವನ್ನು ರದ್ದುಗೊಳಿಸಲು ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರಿ ತಮಿಳುನಾಡು ಬಿಜೆಪಿ ಸದಸ್ಯರು ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ತಮಿಳುನಾಡು ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಜನವರಿ 29 ರೊಳಗೆ ಅರ್ಜಿಯ ಬಗ್ಗೆ ತಮಿಳುನಾಡು ಸರ್ಕಾರದ ಪ್ರತಿಕ್ರಿಯೆಯನ್ನು ಪೀಠವು ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com