ನಿಲ್ಲದ ವಕ್ಫ್ ತಿದ್ದುಪಡಿ ಮಸೂದೆ ಹೋರಾಟ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಮತ್ತು AIMIM

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿಧಾನಸಭೆಯಲ್ಲಿ ಮಸೂದೆಯನ್ನು ಪ್ರಶ್ನಿಸಲು ದ್ರಾವಿಡ ಮುನ್ನೇತ್ರ ಕಳಗಂ (DMK) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಿನ್ನೆ ಘೋಷಿಸಿತ್ತು.
ನಿಲ್ಲದ ವಕ್ಫ್ ತಿದ್ದುಪಡಿ ಮಸೂದೆ ಹೋರಾಟ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಮತ್ತು AIMIM
Updated on

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ ಸಂಸತ್ತಿನ ಅನುಮೋದನೆ ಪಡೆದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ, ಇದು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿಧಾನಸಭೆಯಲ್ಲಿ ಮಸೂದೆಯನ್ನು ಪ್ರಶ್ನಿಸಲು ದ್ರಾವಿಡ ಮುನ್ನೇತ್ರ ಕಳಗಂ (DMK) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಿನ್ನೆ ಘೋಷಿಸಿತ್ತು. ಇದಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ತಮ್ಮ ಅರ್ಜಿಯಲ್ಲಿ, ಮಸೂದೆಯು ವಕ್ಫ್ ಆಸ್ತಿಗಳು ಮತ್ತು ಅವುಗಳ ನಿರ್ವಹಣೆಯ ಮೇಲೆ ಅನಿಯಂತ್ರಿತ ನಿರ್ಬಂಧಗಳನ್ನು ವಿಧಿಸುತ್ತದೆ, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ವಾದಿಸಿದ್ದಾರೆ. ಪ್ರಸ್ತಾವಿತ ಕಾನೂನು ಇತರ ಧಾರ್ಮಿಕ ದತ್ತಿಗಳ ಆಡಳಿತದಲ್ಲಿ ಇಲ್ಲದ ನಿರ್ಬಂಧಗಳನ್ನು ವಿಧಿಸುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳಲಾಗಿದೆ.

ನಿಲ್ಲದ ವಕ್ಫ್ ತಿದ್ದುಪಡಿ ಮಸೂದೆ ಹೋರಾಟ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಮತ್ತು AIMIM
ವಕ್ಫ್ ಮಸೂದೆ ಚರ್ಚೆ: ಸಂಸತ್ ಬಜೆಟ್ ಅಧಿವೇಶನದಲ್ಲಿ ಶೇ.100 ರಷ್ಟು ಉತ್ಪಾದಕತೆ, ಇತಿಹಾಸ ಸೃಷ್ಟಿ!

ಬಿಹಾರದ ಕಿಶನ್‌ಗಂಜ್‌ನ ಲೋಕಸಭಾ ಸಂಸದ ಜಾವೇದ್, ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿಯ (JPC) ಸದಸ್ಯರೂ ಆಗಿದ್ದರು.

ಲೋಕಸಭೆಯು ಮಸೂದೆಯನ್ನು 288:232 ಮತಗಳಿಂದ ಅಂಗೀಕರಿಸಿದರೆ; ರಾಜ್ಯಸಭೆಯಲ್ಲಿ ಅದು 128:95 ಮತಗಳಿಂದ ಅಂಗೀಕರಿಸಲ್ಪಟ್ಟಿತು. ಎರಡೂ ಸದನಗಳು 12 ಗಂಟೆಗಳ ನಿರಂತರ ಚರ್ಚೆ, ವಾಗ್ವಾದಗಳನ್ನು ಕಂಡವು. ಮಸೂದೆಯು ಕಾನೂನಾಗುವ ಮೊದಲು ರಾಷ್ಟ್ರಪತಿಗಳ ಅನುಮೋದನೆಗೆ ಹೋಗಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಮಸೂದೆಯನ್ನು ಪ್ರಶ್ನಿಸಿ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಮ್ಮ ಅರ್ಜಿಯಲ್ಲಿ ವಕ್ಫ್‌ಗಳಿಗೆ ಹಾಗೂ ಹಿಂದೂ, ಜೈನ ಮತ್ತು ಸಿಖ್ ಧಾರ್ಮಿಕ ಮತ್ತು ದತ್ತಿ ದತ್ತಿಗಳಿಗೆ ಈ ಹಿಂದೆ ನೀಡಲಾದ ವಿವಿಧ ರಕ್ಷಣೆಗಳನ್ನು ತೆಗೆದುಹಾಕುತ್ತದೆ ಎಂದು ವಾದಿಸಿದ್ದಾರೆ.

ವಕ್ಫ್‌ಗಳಿಗೆ ನೀಡಲಾದ ರಕ್ಷಣೆಯನ್ನು ಕಡಿಮೆ ಮಾಡುವುದರಿಂದ ಅವುಗಳನ್ನು ಇತರ ಧರ್ಮಗಳ ಧಾರ್ಮಿಕ ಮತ್ತು ದತ್ತಿಗಳಿಗಾಗಿ ಉಳಿಸಿಕೊಳ್ಳುವುದು ಮುಸ್ಲಿಮರ ವಿರುದ್ಧ ಪ್ರತಿಕೂಲ ತಾರತಮ್ಯವಾಗಿದೆ. ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವ ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ರಾಷ್ಟ್ರಪತಿ ಮೊರೆ ಹೋಗಲು AIMPLB ನಿರ್ಧಾರ

ವಕ್ಫ್ ಮಸೂದೆಗೆ ಒಪ್ಪಿಗೆ ನೀಡುವ ಮೊದಲು, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಮನವಿ ಸಲ್ಲಿಸಲು ಭೇಟಿಗೆ ಸಮಯ ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com