ಬಿಹಾರದಲ್ಲಿ ಸಿಡಿಲು, ಆಲಿಕಲ್ಲು ಮಳೆಯಿಂದ 61 ಮಂದಿ ಸಾವು

ಆಲಿಕಲ್ಲು ಮಳೆ ಮತ್ತು ಮಳೆ ಸಂಬಂಧಿತ ಘಟನೆಗಳಲ್ಲಿ 39 ಜನ ಸಾವನ್ನಪ್ಪಿದ್ದರೆ, ಗುರುವಾರ ಸಿಡಿಲು ಬಡಿದು 22 ಜನ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
lightning strike incidents in Bihar
ಸಾಂದರ್ಭಿಕ ಚಿತ್ರonline desk
Updated on

ಪಾಟ್ನಾ: ಬಿಹಾರದಲ್ಲಿ ಸಿಡಿಲು ಮತ್ತು ಆಲಿಕಲ್ಲು ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಆಲಿಕಲ್ಲು ಮಳೆ ಮತ್ತು ಮಳೆ ಸಂಬಂಧಿತ ಘಟನೆಗಳಲ್ಲಿ 39 ಜನ ಸಾವನ್ನಪ್ಪಿದ್ದರೆ, ಗುರುವಾರ ಸಿಡಿಲು ಬಡಿದು 22 ಜನ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಗುರುವಾರ ಸಂಜೆವರೆಗೆ ಇಪ್ಪತ್ತೈದು ಸಾವುಗಳು ವರದಿಯಾಗಿವೆ ಮತ್ತು ವಿವಿಧ ಜಿಲ್ಲೆಗಳಿಂದ ಡೇಟಾವನ್ನು ಸಂಗ್ರಹಿಸಿದ ನಂತರ ಸಾವಿನ ಸಂಖ್ಯೆ 61ಕ್ಕೆ ಏರಿದೆ. ನಳಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 23 ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lightning strike incidents in Bihar
ಸರ್ಕಾರಕ್ಕೆ ಹೊರೆಯಾದ ಸಿಡಿಲು ಬಡಿತ ಪ್ರಕರಣಗಳು; ರಕ್ಷಣೆ ಮಾನದಂಡಗಳ ಬದಲಾವಣೆಗೆ ಹೆಚ್ಚಿದ ಒತ್ತಡ

"ಗುರುವಾರ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಸಿಡಿಲು, ಆಲಿಕಲ್ಲು ಮಳೆ ಮತ್ತು ಮಳೆ ಸಂಬಂಧಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ 61 ಕ್ಕೆ ಏರಿದೆ" ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

"ನಳಂದ ಜಿಲ್ಲೆಯಲ್ಲಿ ಅತಿ ಹೆಚ್ಚು, 23 ಮಂದಿ ಸಾವನ್ನಪ್ಪಿದ್ದಾರೆ, ನಂತರ ಭೋಜ್‌ಪುರ(ಆರು), ಸಿವಾನ್, ಗಯಾ, ಪಾಟ್ನಾ ಮತ್ತು ಶೇಖ್‌ಪುರದಲ್ಲಿ ತಲಾ ನಾಲ್ವರು, ಜಮುಯಿಯಲ್ಲಿ ಮೂವರು ಮತ್ತು ಜೆಹಾನಾಬಾದ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಗೋಪಾಲ್‌ಗಂಜ್, ಮುಜಾಫರ್‌ಪುರ್, ಅರ್ವಾಲ್, ದರ್ಭಂಗಾ, ಬೇಗುಸರೈ, ನಹರ್ಸಾ, ಕತಿಹಾರ್, ಲಖಿಪುರ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com