ರಾಜ್ಯ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಷ್ಟ್ರಪತಿ, ರಾಜ್ಯಪಾಲರ ಪಾತ್ರ ಕುರಿತು ಸುಪ್ರೀಂ ಕೋರ್ಟ್ ತೀರ್ಪು: ಪರಿಶೀಲನಾ ಅರ್ಜಿ ಸಲ್ಲಿಕೆಗೆ ಗೃಹ ಸಚಿವಾಲಯ ಚಿಂತನೆ

ಸುಪ್ರೀಂ ಕೋರ್ಟ್ ಆದೇಶವು ರಾಜ್ಯಪಾಲರು ಉಲ್ಲೇಖಿಸುವ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿಗಳಿಗೆ ಮೂರು ತಿಂಗಳ ಗಡುವನ್ನು ನಿಗದಿಪಡಿಸಿರುವುದರಿಂದ ಸಚಿವಾಲಯವು ಈ ಕ್ರಮವನ್ನು ಪರಿಗಣಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಕಾನೂನು ಅಂಶಗಳಲ್ಲಿನ ಕೆಲವು 'ದೋಷಗಳನ್ನು' ಉಲ್ಲೇಖಿಸಿ ತಮಿಳುನಾಡು ಸರ್ಕಾರ ರಾಜ್ಯಪಾಲ ಆರ್.ಎನ್. ರವಿ ವಿರುದ್ಧ ಸಲ್ಲಿಸಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಏಪ್ರಿಲ್ 8 ರಂದು ನೀಡಿದ ಆದೇಶದ ವಿರುದ್ಧ ಕೇಂದ್ರ ಗೃಹ ಸಚಿವಾಲಯ (MHA) ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ.

ಸುಪ್ರೀಂ ಕೋರ್ಟ್ ಆದೇಶವು ರಾಜ್ಯಪಾಲರು ಉಲ್ಲೇಖಿಸುವ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿಗಳಿಗೆ ಮೂರು ತಿಂಗಳ ಗಡುವನ್ನು ನಿಗದಿಪಡಿಸಿರುವುದರಿಂದ ಸಚಿವಾಲಯವು ಈ ಕ್ರಮವನ್ನು ಪರಿಗಣಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೃಹ ಸಚಿವಾಲಯವು ಅಂತಹ ಉಲ್ಲೇಖಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ರಾಷ್ಟ್ರಪತಿಗಳ ನಿರ್ಧಾರಗಳನ್ನು ರಾಜ್ಯಗಳಿಗೆ ತಿಳಿಸಲು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುವುದರಿಂದ, ಈ ವಿಷಯವು ನೇರವಾಗಿ ಅದರ ವ್ಯಾಪ್ತಿಯನ್ನು ಒಳಗೊಂಡಿದೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್‌ನ ಆದೇಶವು ಲೋಪದೋಷವಿರುವ ಮಸೂದೆಗಳನ್ನು ಮರುಪರಿಶೀಲಿಸಲು ಅವಕಾಶ ಮಾಡಿಕೊಡುತ್ತದೆ. ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ, ಅಂತಹ ಮಸೂದೆಗಳನ್ನು ರಾಜ್ಯ ವಿಧಾನಸಭೆಗಳಲ್ಲಿ ಅವುಗಳ ಮೂಲ ರೂಪದಲ್ಲಿ ಅಥವಾ ರಾಷ್ಟ್ರಪತಿಗಳು ಸೂಚಿಸಿದ ತಿದ್ದುಪಡಿಗಳೊಂದಿಗೆ ಹಿಂದಿರುಗಿಸುವ ಮೂಲಕ ಮಾತ್ರ ಮರುಸ್ಥಾಪಿಸಬಹುದು ಎಂದು ಅವರು ಹೇಳಿದರು.

ರಾಷ್ಟ್ರಪತಿಗಳು ಮಸೂದೆಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿದಾಗ, ಅದನ್ನು ರದ್ದುಗೊಂಡಿದೆ ಎಂದು ಪರಿಗಣಿಸಲಾಗುತ್ತದೆ. ವಾದಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಭಿಪ್ರಾಯಗಳನ್ನು ಸಮರ್ಪಕವಾಗಿ ಮಂಡಿಸಲು ಸಾಧ್ಯವಾಗದ ಕಾರಣ ಪರಿಶೀಲನಾ ಅರ್ಜಿಯನ್ನು ಸಲ್ಲಿಸುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳು ವಾದಿಸಿದರು.

ಸಂವಿಧಾನದ 201 ನೇ ವಿಧಿಯು ರಾಜ್ಯ ಶಾಸನಗಳಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರಪತಿಗಳ ಅಂತಿಮ ನಿರ್ಧಾರವನ್ನು ಪ್ರಕ್ರಿಯೆಗೊಳಿಸಲು ಮತ್ತು ತಿಳಿಸಲು ಗೃಹ ಸಚಿವಾಲಯವು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಬೇಕೆಂದು ಆದೇಶಿಸುತ್ತದೆ ಎಂದು ಅಧಿಕಾರಿಗಳು ಹೇಳಿದರು.

Supreme court
ಇದೇ ಮೊದಲು: ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್‌ನ ಆದೇಶದ ನಂತರ ತಮಿಳುನಾಡು ಸರ್ಕಾರವು ಶನಿವಾರ ಸರ್ಕಾರಿ ಗೆಜೆಟ್‌ನಲ್ಲಿ ಈ 10 ಕಾನೂನುಗಳನ್ನು ಅಧಿಸೂಚನೆ ಮಾಡಿತು, ಇದನ್ನು ರಾಜ್ಯವು "ಸಮ್ಮತಿ ಪಡೆದಿದೆ" ಎಂದು ಗುರುತಿಸಿದೆ.

ಏಪ್ರಿಲ್ 8 ರ ತೀರ್ಪಿನಲ್ಲಿ, ರಾಷ್ಟ್ರಪತಿಗಳಿಗೆ ಮಸೂದೆಗಳನ್ನು ಕಾಯ್ದಿರಿಸುವ ರಾಜ್ಯಪಾಲರ ನಿರ್ಧಾರವು ಕಾನೂನುಬಾಹಿರ ಮತ್ತು ತಪ್ಪಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು.

ಸಂವಿಧಾನದಲ್ಲಿ ವಿವರಿಸಿರುವ ನಿರ್ದಿಷ್ಟ ಸಂದರ್ಭಗಳಲ್ಲಿ ಮಾತ್ರ ರಾಜ್ಯಪಾಲರು ವಿವೇಚನೆಯನ್ನು ಬಳಸಬಹುದು ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ಅಭಿಪ್ರಾಯಪಟ್ಟಿದೆ. 142 ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು, ಮಸೂದೆಗಳನ್ನು ರಾಜ್ಯಪಾಲರಿಗೆ ಮರು-ಪ್ರಸ್ತುತಪಡಿಸಿದ ನಂತರ ಒಪ್ಪಿಗೆಯನ್ನು ಪಡೆದಂತೆ ಪರಿಗಣಿಸಬೇಕೆಂದು ನ್ಯಾಯಾಲಯ ತೀರ್ಪು ನೀಡಿದೆ.

ರಾಜ್ಯಪಾಲರು ಉಲ್ಲೇಖಿಸಿದ ಮಸೂದೆಗಳನ್ನು ಸ್ವೀಕರಿಸಿದ ಮೂರು ತಿಂಗಳೊಳಗೆ ರಾಷ್ಟ್ರಪತಿಗಳು ನಿರ್ಧರಿಸಬೇಕೆಂದು ಅದು ನಿರ್ದೇಶಿಸಿತು. ರಾಷ್ಟ್ರಪತಿಗಳು ಒಪ್ಪಿಗೆಯನ್ನು ತಡೆಹಿಡಿದರೆ ರಾಜ್ಯ ಸರ್ಕಾರಗಳು ನೇರವಾಗಿ ಸುಪ್ರೀಂ ಕೋರ್ಟ್ ನ್ನು ಸಂಪರ್ಕಿಸಲು ಅವಕಾಶ ಮಾಡಿಕೊಟ್ಟಿತು.

Supreme court
Governor’s powers: ರಾಜ್ಯಪಾಲರ ಅಧಿಕಾರ, ಹೊಣೆಗಾರಿಕೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು; ಹೇಳಿದ್ದು ಹೀಗೆ...

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com