ತಮಿಳು ನಾಡು ಸ್ವಾಯತ್ತತೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ ಸ್ಟಾಲಿನ್ ಘೋಷಣೆ

ಸೂಕ್ತ ಶಿಫಾರಸುಗಳೊಂದಿಗೆ ಅಂತಿಮ ವರದಿಯನ್ನು ಎರಡು ವರ್ಷಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
M K Stalin
ಎಂ ಕೆ ಸ್ಟಾಲಿನ್
Updated on

ಚೆನ್ನೈ: ರಾಜ್ಯದ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕ್ರಮೇಣ ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ರಾಜ್ಯ ಸ್ವಾಯತ್ತತೆ ಕುರಿತು ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಕುರಿಯನ್ ಜೋಸೆಫ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಜ್ಯ ಸ್ವಾಯತ್ತತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಬಂಧವನ್ನು ವಿವರವಾಗಿ ಪರಿಶೀಲಿಸುತ್ತದೆ. ಇದು ಮುಂದಿನ ವರ್ಷ ಜನವರಿಯಲ್ಲಿ ತನ್ನ ಮಧ್ಯಂತರ ವರದಿಯನ್ನು ಸಲ್ಲಿಸುತ್ತದೆ.

ಸೂಕ್ತ ಶಿಫಾರಸುಗಳೊಂದಿಗೆ ಅಂತಿಮ ವರದಿಯನ್ನು ಎರಡು ವರ್ಷಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

M K Stalin
ಹೊಸ ಭಾಷಾ ಸಮರ ಆರಂಭಿಸಬೇಡಿ, ದೇಶದಲ್ಲಿ ಏಕತೆ ಎತ್ತಿ ಹಿಡಿಯಿರಿ: ಕೇಂದ್ರಕ್ಕೆ ತಮಿಳು ನಾಡು ಸಿಎಂ ಸ್ಟಾಲಿನ್ ಒತ್ತಾಯ

ಸಮಿತಿಯು ಮಾಜಿ ಅಧಿಕಾರಿ ಅಶೋಕ್ ವರ್ಧನ್ ಶೆಟ್ಟಿ ಮತ್ತು ರಾಜ್ಯ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಎಂ ನಾಗನಾಥನ್ ಅವರನ್ನು ಸದಸ್ಯರನ್ನಾಗಿ ಹೊಂದಿರುತ್ತದೆ.

ರಾಜ್ಯ ಪಟ್ಟಿಯಿಂದ ಸಮಕಾಲೀನ ಪಟ್ಟಿಗೆ ಹೋದ ವಿಷಯಗಳನ್ನು ವರ್ಗಾಯಿಸಲು ಸಮಿತಿಯು ಕಾನೂನಿನ ಪ್ರಕಾರ ಅಧ್ಯಯನ ಮಾಡುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ರಾಜ್ಯಗಳ ವ್ಯಾಪ್ತಿಯಿಂದ ಹೊರಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com