ಬ್ರಾಹ್ಮಣರ ವಿರುದ್ಧ ಹೇಳಿಕೆ: Anurag Kashyap ಕುಟುಂಬಕ್ಕೆ ಅತ್ಯಾಚಾರದ ಬೆದರಿಕೆ ಬೆನ್ನಲ್ಲೇ ನಿರ್ಮಾಪಕನಿಂದ ಕ್ಷಮೆ ಯಾಚನೆ

ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರಿಗೆ ನೀಡಿದ ಉತ್ತರದಲ್ಲಿ ಕಶ್ಯಪ್ ಬ್ರಾಹ್ಮಣ ಸಮುದಾಯದ ಬಗ್ಗೆ ಈ ಅಸಂಬದ್ಧ ಹೇಳಿಕೆ ನೀಡಿದ್ದರು.
Anurag Kashyap
ಅನುರಾಗ್ ಕಶ್ಯಪ್online desk
Updated on

ಮುಂಬೈ: ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿ ಸುದ್ದಿಯಾಗಿದ್ದ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್, ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ 'ಸಾವು ಮತ್ತು ಅತ್ಯಾಚಾರ ಬೆದರಿಕೆ' ಬರುತ್ತಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರಿಗೆ ನೀಡಿದ ಉತ್ತರದಲ್ಲಿ ಕಶ್ಯಪ್ ಬ್ರಾಹ್ಮಣ ಸಮುದಾಯದ ಬಗ್ಗೆ ಈ ಅಸಂಬದ್ಧ ಹೇಳಿಕೆ ನೀಡಿದ್ದರು.

52 ವರ್ಷದ ಚಲನಚಿತ್ರ ನಿರ್ಮಾಪಕ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

'ನಾನು ಕ್ಷಮೆಯಾಚಿಸುತ್ತಿದ್ದೇನೆ. ನನ್ನ ಪೋಸ್ಟ್‌ಗಾಗಿ ಅಲ್ಲ, ಆದರೆ ತಪ್ಪಾಗಿ ಅರ್ಥೈಸಿದ ಒಂದು ಸಾಲಿಗಾಗಿ ಮತ್ತು ಹರಡುತ್ತಿರುವ ದ್ವೇಷಕ್ಕಾಗಿ ಕ್ಷಮೆಯಾಚಿಸುತ್ತಿದ್ದೇನೆ. ಮಗಳು, ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಸಂಸ್ಕಾರದ ಕಿಂಗ್‌ಪಿನ್‌ಗಳಿಂದ ಅತ್ಯಾಚಾರ ಮತ್ತು ಜೀವ ಬೆದರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಕಶ್ಯಪ್ ಹೇಳಿದ್ದಾರೆ.

Anurag Kashyap
ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? ನಿರ್ದೇಶಕ ಅನುರಾಗ್‌ ಕಶ್ಯಪ್‌ ಉದ್ಧಟತನ

'ನಾನು ಹೇಳಿದ್ದನ್ನು ನಾನು ಹಿಂತೆಗೆದುಕೊಳ್ಳುವುದಿಲ್ಲ. ನೀವು ಬಯಸಿದಷ್ಟು ನನ್ನನ್ನು ನಿಂದಿಸಿ. ನನ್ನ ಕುಟುಂಬ ಏನನ್ನೂ ಹೇಳಲಿಲ್ಲ. ನೀವು ಕ್ಷಮೆಯಾಚಿಸಲು ಬಯಸಿದರೆ, ನಾನು ಕ್ಷಮೆ ಕೇಳುತ್ತೇನೆ ಅಷ್ಟೇ' ಎಂದು ಅನುರಾಗ್ ಕಶ್ಯಪ್ ಹೇಳಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನ ಮತ್ತೊಂದು ಪೋಸ್ಟ್‌ನಲ್ಲಿ, ಕಶ್ಯಪ್ ವಿವಾದಾತ್ಮಕ ಕಾಮೆಂಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ.

'ಎಲ್ಲರೂ ಪ್ರತಿಕ್ರಿಯೆಯನ್ನು ಓದಿದ್ದಾರೆ ಮತ್ತು ಅವರೆಲ್ಲರೂ ಆಕ್ರೋಶಗೊಂಡಿದ್ದಾರೆ. ನೀವು ಬರೆಯುವ ಮೊದಲು ಕನಿಷ್ಠ ಸಂದರ್ಭವನ್ನು ನೋಡಿ' ಎಂದು ನಿರ್ದೇಶಕರು ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಸಮಾಜ ಸುಧಾರಕರಾದ ಜ್ಯೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ಅವರ ಜೀವನ ಚರಿತ್ರೆಯಾದ ಫುಲೆ ಬಿಡುಗಡೆಯ ಬಗ್ಗೆ ಕಶ್ಯಪ್ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿ ಪೋಸ್ಟ್ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com