
ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ ಕುರಿತು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಎತ್ತಿದ ಅಂಶಗಳಿಗೆ ಸುಪ್ರೀಂ ಕೋರ್ಟ್ ಪ್ರಾಮುಖ್ಯತೆ ನೀಡಿದೆ ಮತ್ತು ಅಂತಹ ಆಸ್ತಿಗಳ ವಿವಾದ ಸೃಷ್ಟಿಸಲು ಸರ್ಕಾರ ಉದ್ದೇಶಪೂರ್ವಕವಾಗಿ ಈ ವಿಷಯವನ್ನು ತೆಗೆದುಕೊಂಡಿದೆ ತರಾಟೆಗೆ ತೆಗೆದುಕೊಂಡಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.
ಇಲ್ಲಿ ನಡೆದ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಇಡಿ ಚಾರ್ಚ್ ಶೀಟ್ ನಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರಿದೆ ಮತ್ತು ದೆಹಲಿ, ಲಖನೌ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಸೇಡಿನ ರಾಜಕೀಯದಿಂದ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಉಲ್ಲೇಖಿಸಿದ ಅವರು, ''ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಅಂಶಗಳಿಗೆ ಸುಪ್ರೀಂ ಕೋರ್ಟ್ ಪ್ರಾಮುಖ್ಯತೆ ನೀಡಿರುವುದು ನನಗೆ ಖುಷಿ ತಂದಿದೆ. ಬಿಜೆಪಿ ಮತ್ತು ಕೇಂದ್ರ ಸರಕಾರವು ವಕ್ಫ್ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದೆ. ಸರ್ಕಾರ ದುರುದ್ದೇಶದಿಂದ ಈ ವಿಚಾರವನ್ನು ವಿವಾದ ಮಾಡಿದೆ ಎಂದು ಆರೋಪಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕ್ರಮದಿಂದ ಕಾಂಗ್ರೆಸ್ ನ್ನು ಬೆದರಿಸಲಾಗುತ್ತಿದೆ. ದೊಡ್ಡ ಪಿತೂರಿಯ ಭಾಗವಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ನಲ್ಲಿ ಹಾಕಲಾಗಿದೆ. ಆದರೆ ಅವರು ಯಾರ ಹೆಸರನ್ನು ಹಾಕಿದರೂ ನಾವು ಹೆದರುವುದಿಲ್ಲ. ಎರಡು ಮೂರು ದಿನಗಳ ಹಿಂದೆಯಷ್ಟೇ ದೆಹಲಿ, ಲಖನೌ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಇದೆಲ್ಲವೂ ಸೇಡಿನ ಮನೋಭಾವದಿಂದ ನಡೆಯುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.
'ಯಂಗ್ ಇಂಡಿಯನ್' ಲಾಭಕ್ಕಾಗಿ ಕಂಪನಿ ಅಲ್ಲ' ಎಂದು ಪ್ರತಿಪಾದಿಸಿದ ಖರ್ಗೆ, ಅಸೋಸಿಯೇಟೆಡ್ ಜರ್ನಲ್ ಲಿಮಿಟೆಂಡ್ ಗೆ ಷೇರುಗಳು, ಆಸ್ತಿಗಳು ಅಥವಾ ಲಾಭವನ್ನು ಯಾರೂ ಪಡೆಯಲು ಅಥವಾ ವರ್ಗಾಯಿಸಲು ಸಾಧ್ಯವಿಲ್ಲ ಎಂಬುದು ಇದರರ್ಥವಾಗಿದೆ. ಬಿಜೆಪಿ ಜನರು ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ನಾವು ಸಾರ್ವಜನಿಕರಿಗೆ ಸತ್ಯವನ್ನು ಹೇಳಬೇಕಾಗಿದೆ ಎಂದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರೂ. 988 ಕೋಟಿ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಸೋನಿಯಾ ಮತ್ತು ರಾಹುಲ್ ಗಾಂಧಿ ಬಹುಪಾಲು ಷೇರುದಾರರಾಗಿರುವ ಯಂಗ್ ಇಂಡಿಯನ್ ಎಂಬ ತಮ್ಮ ಖಾಸಗಿ ಕಂಪನಿಗೆ ಕೇವಲ ರೂ. 50 ಲಕ್ಷಕ್ಕೆ ಶೇ. 99 ರಷ್ಟು ಷೇರುಗಳನ್ನು ವರ್ಗಾಯಿಸುವ ಮೂಲಕ
ಅದರ ಸಾರ್ವಜನಿಕ ಕಂಪನಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ರೂ. 2,000 ಕೋಟಿ ಮೌಲ್ಯದ ಆಸ್ತಿಯನ್ನು ಆಕ್ರಮಿಸಲು ಕಾಂಗ್ರೆಸ್ ನಾಯಕರು "ಕ್ರಿಮಿನಲ್ ಪಿತೂರಿ" ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
Advertisement