ಪಹಲ್ಗಾಮ್ ದಾಳಿ: ಪಾಕಿಸ್ತಾನ, ಲಷ್ಕರ್-ಎ-ತೊಯ್ಬಾಗೆ ಧನ್ಯವಾದ ಹೇಳಿದ ಜಾರ್ಖಂಡ್ ವ್ಯಕ್ತಿ ಬಂಧನ

ಈ ವ್ಯಕ್ತಿ ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿ ದಾಳಿ ಮಾಡುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಿಕೊಂಡಿದ್ದಾನೆ.
ವ್ಯಕ್ತಿ ಬಂಧನ
ವ್ಯಕ್ತಿ ಬಂಧನ
Updated on

ರಾಂಚಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಮತ್ತು ಲಷ್ಕರ್-ಎ-ತೊಯ್ಬಾಗೆ ಧನ್ಯವಾದ ಹೇಳಿದ ಆರೋಪದ ಮೇಲೆ ಜಾರ್ಖಂಡ್ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ನೌಶಾದ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿ ದಾಳಿ ಮಾಡುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಿಕೊಂಡಿದ್ದಾನೆ.

ಬೊಕಾರೊದ ಬಲಿದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಾ ನಗರದಲ್ಲಿ ಬುಧವಾರ ಈ ವ್ಯಕ್ತಿಯನ್ನು ಬಂಧಿಸಲಾಗಿದೆ.

ವ್ಯಕ್ತಿ ಬಂಧನ
ಗುಪ್ತಚರ ಇಲಾಖೆ ವೈಫಲ್ಯವೇ ಪಹಲ್ಗಾಮ್ ಉಗ್ರರ ದಾಳಿಗೆ ಕಾರಣ: ಮೋದಿ ಸರ್ಕಾರದ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ; Video

ಮಂಗಳವಾರ ಮಧ್ಯಾಹ್ನ, ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ 28 ಜನರನ್ನು ಕೊಂದಿದ್ದಾರೆ. ದಾಳಿಯಲ್ಲಿ ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2019 ರ ಪುಲ್ವಾಮಾ ದಾಳಿಯ ನಂತರ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ ಎಂದು ಹಲವರು ಪರಿಗಣಿಸುತ್ತಾರೆ.

ಇಸ್ಲಾಮಿಕ್ ವಕೀಲ ಮತ್ತು ದಿಟ್ಟ ವಾಗ್ಮಿ ಎಂದು ಹೇಳಿಕೊಳ್ಳುವ ಆರೋಪಿ, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ 'ಕ್ವಾಸ್ಮಿ' ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

"ಧನ್ಯವಾದಗಳು ಪಾಕಿಸ್ತಾನ, ಧನ್ಯವಾದಗಳು ಲಷ್ಕರ್-ಎ-ತೈಬಾ, ಅಲ್ಲಾಹನು ನಿಮ್ಮನ್ನು ಯಾವಾಗಲೂ ಆಶೀರ್ವದಿಸಲಿ. ಆಮೆನ್, ಆಮೆನ್. ಆರ್‌ಎಸ್‌ಎಸ್, ಬಿಜೆಪಿ, ಬಜರಂಗದಳ ಮತ್ತು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ ನಾವು ಸಂತೋಷವಾಗಿರುತ್ತೇವೆ" ಎಂದು ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com