ಪಹಲ್ಗಾಮ್ ಗೆ ಅಮಿತ್ ಶಾ ಭೇಟಿ; ಪರಿಶೀಲನೆ, ಸಂತ್ರಸ್ತರ ಆಕ್ರಂದನ, ಸಂಕಟ! Video

ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Amit sha
ಕೇಂದ್ರ ಗೃಹ ಸಚಿವ ಅಮಿತ್ ಶಾ
Updated on

ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯ ನಡೆಸಿದ ಜಮ್ಮು-ಕಾಶ್ಮೀರಕ್ಕೆ ಬುಧವಾರ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಳ ಪರಿಶೀಲನೆ ನಡೆಸಿದರು.

ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸುದ್ದಿ ಸಂಸ್ಥೆ ಎಎನ್‌ಐ ಪೋಸ್ಟ್ ಮಾಡಿರುವ ವೀಡಿಯೊದಲ್ಲಿ, ದುಷ್ಕೃತ್ಯದಿಂದ ಪಾರಾದವರು ಕೈಮುಗಿದು ಅಮಿತ್ ಶಾ ಹಾಗೂ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗೌವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ತಮ್ಮ ಸಂಕಟ ಹಂಚಿಕೊಳ್ಳುತ್ತಿರುವುದು ಕಂಡುಬಂದಿದೆ.

ಈ ವೇಳೆ ಮಾತನಾಡಿದ ಅಮಿತ್ ಶಾ, ಮಾರಣಾಂತಿಕ ದಾಳಿ ನಡೆಸಿದ ಉಗ್ರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.

Amit sha
Pahalgam attack: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು- ರಾಹುಲ್ ಗಾಂಧಿ

ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ. ಕಾಲ್ನಡಿಗೆ ಅಥವಾ ಕುದುರೆ ಮೂಲಕ ತೆರಳಬೇಕಾದ ಬೈಸರಾನ್ ಕಣಿವೆ ಪ್ರದೇಶದಲ್ಲಿ ಈ ದಾಳಿ ನಡೆದಿದೆ.

ಶ್ರೀನಗರದ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾದವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಭೀಕರ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಮಿತ್ ಶಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com