ಪಹಲ್ಗಾಮ್ ದಾಳಿಗೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಲಿಂಕ್ ಮಾಡಿ ಸೋಷಿಯಲ್ ಮೀಡಿಯಾ ಪೋಸ್ಟ್: ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ದೂರು ದಾಖಲಿಸಿದ್ದಾರೆ.
Rahul Gandhi
ರಾಹುಲ್ ಗಾಂಧಿ
Updated on

ಬೆಂಗಳೂರು: ರಾಹುಲ್ ಗಾಂಧಿಯವರ ವಿದೇಶ ಪ್ರವಾಸವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧ ಕಲ್ಪಿಸಿ ಅವಹೇಳನಕಾರಿಯಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ವಿಷಯ ಸಂಬಂಧವಾಗಿ ರಾಜ್ಯ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆ ಪೋಸ್ಟ್ ನ್ನು ಅಳಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ದೂರು ದಾಖಲಿಸಿದ್ದಾರೆ.

ರಾಹುಲ್ ಗಾಂಧಿಯವರ ವಿದೇಶ ಪ್ರವಾಸವನ್ನು ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಗೆ ಲಿಂಕ್ ಮಾಡುವ ಉದ್ದೇಶವನ್ನು ಈ ಪೋಸ್ಟ್ ಹೊಂದಿದೆ ಎಂದು ಧನಂಜಯ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿಯ ಕ್ರಮವು ರಾಹುಲ್ ಗಾಂಧಿಯವರ ಪ್ರತಿಷ್ಠೆಯನ್ನು ಹಾಳು ಮಾಡುವ ಮತ್ತು ಅವರ ಖ್ಯಾತಿಗೆ ಹಾನಿ ಮಾಡುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

Rahul Gandhi
Pahalgam Attack: 'ಹಂದಿಗೆ ಲಿಪ್ ಸ್ಟಿಕ್ ಹಾಕಿದ್ರೂ.. ಕಸ ತಿನ್ನೋದನ್ನ ಬಿಡಲ್ಲ'; 'Hamas ಗೆ ಇಸ್ರೇಲ್ ಮಾಡಿದ್ದನ್ನೇ Pakistan ಗೆ ಭಾರತ ಮಾಡಬೇಕು'!

ಘಟನೆಯಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ರಾಷ್ಟ್ರದ ಸಮಗ್ರತೆಯನ್ನು ಕಾಪಾಡಿಕೊಳ್ಳುವಲ್ಲಿನ ತನ್ನ 'ವೈಫಲ್ಯ'ದಿಂದ ದೂರವಿರಿಸಲು ಬಿಜೆಪಿ ಮಾಡಿದ ಪ್ರಯತ್ನ ಇದಾಗಿದೆ ಎಂದು ಅವರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ, ಹೈಗ್ರೌಂಡ್ಸ್ ಪೊಲೀಸರು ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಹರಡಲು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 196 ಮತ್ತು 353(2) ರ ಅಡಿಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com