
ನವದೆಹಲಿ: 26 ಪ್ರವಾಸಿಗರನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಪ್ರಕಟಿಸಿದೆ.
ಭಯೋತ್ಪಾದಕ ದಾಳಿಯ ನಂತರ ರಾಹುಲ್ ಗಾಂಧಿ ತಮ್ಮ ಅಮೆರಿಕ ಭೇಟಿಯನ್ನು ಮೊಟಕುಗೊಳಿಸಿ ಇಂದು ಭಾರತಕ್ಕೆ ವಾಪಸ್ ಆಗಿದ್ದಾರೆ ಮತ್ತು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲೂ ಭಾಗವಹಿಸಿದ್ದರು.
ನಾಳೆ ಕಾಶ್ಮೀರಕ್ಕೆ ತೆರಳುತ್ತಿರುವ ರಾಹುಲ್ ಗಾಂಧಿ ಅವರು ಜಿಎಂಸಿ ಅನಂತ್ನಾಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಇನ್ನು ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಅದಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದು ಹೇಳಿದ್ದಾರೆ.
Advertisement