ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆ: ಮೂವರು ನಕ್ಸಲರ ಹತ್ಯೆ

ದಟ್ಟ ಕಾಡುಗಳು ಮತ್ತು ಬೆಟ್ಟಗಳ ಸರಣಿಯಿಂದ ಸುತ್ತುವರೆದಿರುವ ಪ್ರದೇಶವನ್ನು ಮಾವೋವಾದಿಗಳ ಬೆಟಾಲಿಯನ್ ನಂ.1 ರ ನೆಲೆ ಎಂದು ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ರಾಯ್ಪುರ: ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯ ಕರೆಗುಟ್ಟ ಬೆಟ್ಟಗಳ ಅರಣ್ಯದಲ್ಲಿ ಬೆಳಗ್ಗೆ ಅಂತಾರಾಜ್ಯ ಗಡಿಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಎನ್‌ಕೌಂಟರ್ ಸ್ಥಳದಿಂದ ಮೂವರು ನಕ್ಸಲರ ಶವಗಳನ್ನು ತೆಗೆಯಲಾಗಿದೆ. ಹಲವಾರು ಇತರ ಮಾವೋವಾದಿಗಳು ಸಹ ಭೀಕರ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

ಬಸ್ತಾರ್ ಪ್ರದೇಶದಲ್ಲಿ ಪ್ರಾರಂಭಿಸಲಾದ ಅತಿದೊಡ್ಡ ದಂಗೆ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಗಾರ್ಡ್ (DRG), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (STF), ರಾಜ್ಯ ಪೊಲೀಸರ ಎಲ್ಲಾ ಘಟಕಗಳು ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಅದರ ಗಣ್ಯ ಕಮಾಂಡೋ ಬೆಟಾಲಿಯನ್‌ಗಳು ರೆಸಲ್ಯೂಟ್ ಆಕ್ಷನ್ (CoBRA) ಸೇರಿದಂತೆ ವಿವಿಧ ಘಟಕಗಳಿಗೆ ಸೇರಿದ ಸುಮಾರು 10,000 ಭದ್ರತಾ ಸಿಬ್ಬಂದಿ ಭಾಗವಹಿಸಿದ್ದರು.

Representational image
ಭಾರತೀಯ ಸೇನೆ ದಿಟ್ಟ ಕಾರ್ಯಚರಣೆ: ತಲೆಗೆ 1 ಕೋಟಿ ರೂ ಬಹುಮಾನವಿದ್ದ ನಕ್ಸಲ್ ಪ್ರಯಾಗ್ ಮಾಂಝಿ ಸೇರಿ 8 ಮಂದಿ ಹತ್ಯೆ!

ತೆಲಂಗಾಣ ಪೊಲೀಸರು ಸಹ ಕಾರ್ಯಾಚರಣೆಗೆ ಸಹಾಯ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾವೋವಾದಿಗಳ ಪ್ರಬಲ ಮಿಲಿಟರಿ ರಚನೆಯಾದ ಬೆಟಾಲಿಯನ್ ನಂ.1 ಮತ್ತು ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿಯ ಹಿರಿಯ ಕೇಡರ್‌ಗಳ ಉಪಸ್ಥಿತಿ ಬಗ್ಗೆ ಮಾಹಿತಿಯ ಆಧಾರದ ಮೇಲೆ ಸೋಮವಾರ ಕಾರ್ಯಾಚರಣೆ ಪ್ರಾರಂಭಗೊಂಡಿತ್ತು.

ದಟ್ಟ ಕಾಡುಗಳು ಮತ್ತು ಬೆಟ್ಟಗಳ ಸರಣಿಯಿಂದ ಸುತ್ತುವರೆದಿರುವ ಪ್ರದೇಶವನ್ನು ಮಾವೋವಾದಿಗಳ ಬೆಟಾಲಿಯನ್ ನಂ.1 ರ ನೆಲೆ ಎಂದು ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com