ಭಾರತ ತೊರೆಯಲು 48 ಗಂಟೆಗಳ ಗಡುವು: 191 ಮಂದಿ ಪಾಕ್ ಪ್ರಜೆಗಳು ವಾಪಾಸ್

ಪಾಕಿಸ್ತಾನದಲ್ಲಿ ವಿವಾಹವಾದ ಆದರೆ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಕೆಲವು ಮಹಿಳೆಯರು ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಹಿಂತಿರುಗುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
Children welcome their grandmother who returned from Pakistan, at Attari Border in Amritsar
ಅಮೃತಸರದ ಅಟ್ಟಾರಿ ಗಡಿಯಲ್ಲಿ ಪಾಕಿಸ್ತಾನದಿಂದ ಹಿಂದಿರುಗಿದ ಅಜ್ಜಿಯನ್ನು ಮೊಮ್ಮಕ್ಕಳು ಸ್ವಾಗತಿಸುತ್ತಿರುವುದು
Updated on

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವನ್ನು ತೊರೆಯಲು ಕೇಂದ್ರ ಸರ್ಕಾರವು 48 ಗಂಟೆಗಳ ಗಡುವು ವಿಧಿಸಿದ ನಂತರ, ಭಾರತಕ್ಕೆ ಭೇಟಿ ನೀಡಿದ ಒಟ್ಟು 191 ಪಾಕಿಸ್ತಾನಿ ಪ್ರಜೆಗಳು ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಭೂ ಮಾರ್ಗದ ಮೂಲಕ ತಮ್ಮ ದೇಶಕ್ಕೆ ವಾಪಾಸ್ ಹೋಗಿದ್ದಾರೆ.

ನೆರೆಯ ದೇಶಕ್ಕೆ ಭೇಟಿ ನೀಡಿದ್ದ ಒಟ್ಟು 287 ಭಾರತೀಯ ಪ್ರಜೆಗಳು ಸಹ ಹಿಂತಿರುಗಿದ್ದಾರೆ ಎಂದು ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ವಿವಾಹವಾದ ಆದರೆ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಕೆಲವು ಮಹಿಳೆಯರು ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಹಿಂತಿರುಗುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಭಾರತದಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಬಂದಿದ್ದೇವೆ ಆದರೆ ಪಾಕಿಸ್ತಾನಿ ಪ್ರಜೆಗಳು ದೇಶವನ್ನು ತೊರೆಯಲು ಸರ್ಕಾರ 48 ಗಂಟೆಗಳ ಗಡುವನ್ನು ನಿಗದಿಪಡಿಸಿದ ನಂತರ ಹಿಂತಿರುಗಬೇಕಾಯಿತು ಎಂದು ತಮ್ಮ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ.

ಕಳೆದ ಮಂಗಳವಾರ ಮಧ್ಯಾಹ್ನ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣವಾದ ಪಹಲ್ಗಾಮ್ ಬಳಿಯ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಇಪ್ಪತ್ತಾರು ಜನರು, ಹೆಚ್ಚಾಗಿ ಪ್ರವಾಸಿಗರು ಮೃತಪಟ್ಟು ಹಲವಾರು ಜನರು ಗಾಯಗೊಂಡರು.

ಪಹಲ್ಗಾಮ್ ದಾಳಿಗೆ ಗಡಿಯಾಚೆಗಿನ ಸಂಪರ್ಕಗಳನ್ನು ಗಮನದಲ್ಲಿಟ್ಟುಕೊಂಡು, ಪಾಕಿಸ್ತಾನಿ ಮಿಲಿಟರಿ ಸಂಪರ್ಕಗಳನ್ನು ಹೊರಹಾಕುವುದು, 1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ನ್ನು ತಕ್ಷಣವೇ ಮುಚ್ಚುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೇಂದ್ರ ಸರ್ಕಾರವು ತೆಗೆದುಕೊಂಡಿತು.

Children welcome their grandmother who returned from Pakistan, at Attari Border in Amritsar
ಪಾಕಿಸ್ತಾನದ ಪ್ರಜೆಗಳ ಜೊತೆ ಭಾರತೀಯ ಮಹಿಳೆಯರ ವಿವಾಹ: ಮತ್ತೆ ಕುಟುಂಬಸ್ಥರ ಸೇರಲು ಗಡಿಯಲ್ಲಿ ಹೆಣಗಾಟ; Video

ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗುವುದಿಲ್ಲ. ಈ ಯೋಜನೆಯಡಿಯಲ್ಲಿ ಪ್ರಸ್ತುತ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆಗೆ ದೇಶವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಚಿವ ಸಂಪುಟ ಸಮಿತಿ (CCS) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅಟ್ಟಾರಿಯಲ್ಲಿರುವ ಸಮಗ್ರ ಚೆಕ್-ಪೋಸ್ಟ್ (ICP) ನ್ನು ತಕ್ಷಣವೇ ಮುಚ್ಚಲಾಗುವುದು. ಮಾನ್ಯ ದಾಖಲೆಗಳೊಂದಿಗೆ ಪಾಕಿಸ್ತಾನಕ್ಕೆ ದಾಟಿದವರು ಮೇ 1 ರ ಮೊದಲು ಆ ಮಾರ್ಗದ ಮೂಲಕ ಹಿಂತಿರುಗಬಹುದು ಎಂದು ಸಭೆಯಲ್ಲಿ ಘೋಷಿಸಲಾಯಿತು.

ನಾಳೆ ಅಂದರೆ ಏಪ್ರಿಲ್ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಘೋಷಿಸಿತು. ಪಹಲ್ಗಾಮ್ ದಾಳಿಯ ನಂತರ ಎರಡು ದೇಶಗಳ ನಡುವಿನ ಸಂಬಂಧ ಉದ್ವಿಗ್ನತೆ ಹೆಚ್ಚಾದ ಕಾರಣ ಪಾಕಿಸ್ತಾನದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು ಆದಷ್ಟು ಬೇಗ ಮನೆಗೆ ಮರಳುವಂತೆ ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com