ಪಹಲ್ಗಾಮ್ ಘಟನೆ: ವಿಶ್ವ ನಾಯಕರಿಂದ ಪ್ರಧಾನಿ ಮೋದಿಗೆ ಕರೆ ಮಾಡಿ ಬೆಂಬಲ; ಭಾರತದ ರಾಜತಾಂತ್ರಿಕ ಸಂಪರ್ಕ ಹೆಚ್ಚಳ

ವಿದೇಶಾಂಗ ಸಚಿವ ಎಸ್. ಜೈಶಂಕರ್ ತಮ್ಮ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
The site where terrorists opened fire three days ago on Tuesday, killing at least 26 people and injuring several at a meadow near Pahalgam town, in Anantnag district, Jammu and Kashmir, Friday, April 25, 2025.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣ
Updated on

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಜಾಗತಿಕ ನಾಯಕರು ಖಂಡಿಸುತ್ತಾ ಭಾರತಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಂತೆ, ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನಾ ಸಂಪರ್ಕಗಳನ್ನು ಎತ್ತಿ ತೋರಿಸಲು ಭಾರತ ರಾಜತಾಂತ್ರಿಕ ಸಂಪರ್ಕವನ್ನು ಹೆಚ್ಚಿಸಿದೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ತಮ್ಮ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇಸ್ರೇಲ್, ಈಜಿಪ್ಟ್, ನೇಪಾಳ ಮತ್ತು ಅರ್ಜೆಂಟೀನಾ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ವಿದೇಶಾಂಗ ಸಚಿವಾಲಯದ (MEA) ಇತರ ಹಿರಿಯ ಅಧಿಕಾರಿಗಳೊಂದಿಗೆ, ದೆಹಲಿಯಲ್ಲಿ ವಿದೇಶಿ ರಾಜತಾಂತ್ರಿಕರಿಗೆ ತನಿಖೆ ಮತ್ತು ಭಾರತದ ಪ್ರತಿಕ್ರಿಯೆಯ ಕುರಿತು ಮಾಹಿತಿ ನೀಡುತ್ತಲೇ ಇದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿಯ ನಂತರ ಜಾಗತಿಕ ಮಟ್ಟದಲ್ಲಿ ಈ ಮಾತುಕತೆ ನಡೆದಿದೆ, ಪಾಕಿಸ್ತಾನ ಮೂಲದ ನಿಷೇಧಿತ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಪ್ರತಿನಿಧಿಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಇದು 2019 ರಲ್ಲಿ ಪುಲ್ವಾಮಾ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ.

ದಾಳಿ ಖಂಡಿಸಿದ ಅಮೆರಿಕ

ಕ್ರೂರ ದಾಳಿಯ ಅಪರಾಧಿಗಳಿಗೆ ಶಿಕ್ಷೆ ನೀಡಲು ಅಮೆರಿಕ ಭಾರತದೊಂದಿಗೆ ನಿಲ್ಲುತ್ತದೆ ಎಂದು ಅಮೆರಿಕದ ರಾಷ್ಟ್ರೀಯ ಗುಪ್ತಚರ ಇಲಾಖೆ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಹೇಳಿದ್ದಾರೆ. "ಪಹಲ್ಗಾಮ್‌ನಲ್ಲಿ 26 ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಭೀಕರ ಇಸ್ಲಾಮಿಕ್ ಭಯೋತ್ಪಾದಕ ದಾಳಿಯ ನಂತರ ನಾವು ಭಾರತದೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

The site where terrorists opened fire three days ago on Tuesday, killing at least 26 people and injuring several at a meadow near Pahalgam town, in Anantnag district, Jammu and Kashmir, Friday, April 25, 2025.
ಪಹಲ್ಗಾಮ್ ಭಯೋತ್ಪಾದಕ ದಾಳಿ: ಭಾರತದ ಕ್ರಮಕ್ಕೆ ಪತರುಗುಟ್ಟಿದ ಪಾಕಿಸ್ತಾನ; 'ತಟಸ್ಥ-ಪಾರದರ್ಶಕ' ತನಿಖೆಗೆ ಸಿದ್ಧ ಎಂದ ಪಾಕ್ ಪ್ರಧಾನಿ ಷರೀಫ್

ಅಮೆರಿಕದ ವಿದೇಶಾಂಗ ಇಲಾಖೆಯು ತ್ವರಿತ ನ್ಯಾಯಕೊಡಿಸಬೇಕೆಂದು ಒತ್ತಾಯಿಸಿದೆ. ಭಯೋತ್ಪಾದನೆಯ ವಿರುದ್ಧ ಭಾರತದೊಂದಿಗೆ ದೃಢವಾಗಿ ನಿಲ್ಲುವಂತೆ ಒತ್ತಾಯಿಸಿದೆ.

ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಮೋದಿಯವರಿಗೆ ಕರೆ ಮಾಡಿ, ಪಹಲ್ಗಾಮ್ ಹತ್ಯಾಕಾಂಡವನ್ನು ಅನಾಗರಿಕ ಕೃತ್ಯ ಎಂದು ವ್ಯಾಖ್ಯಾನಿಸಿದ್ದಾರೆ. ಕಳೆದುಕೊಂಡ ಅಮಾಯಕ ಜೀವಗಳಿಗೆ ಸಂತಾಪ ಸೂಚಿಸಿ ಭಾರತದ ನೆರವಿಗೆ ನಿಲ್ಲುತ್ತೇವೆ ಎಂದಿದ್ದಾರೆ.

ಇತರ ಜಾಗತಿಕ ನಾಯಕರಿಂದ ಇದೇ ರೀತಿಯ ಸಂದೇಶಗಳು ಬಂದವು. ಡಚ್ ಪ್ರಧಾನಿ ಡಿಕ್ ಸ್ಕೂಫ್ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಕೂಡ ಮೋದಿಯವರಿಗೆ ಫೋನ್ ಕರೆ ಮಾಡಿ ದಾಳಿಯನ್ನು ಖಂಡಿಸಿ ಭಯೋತ್ಪಾದನೆಯನ್ನು ಎದುರಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

The site where terrorists opened fire three days ago on Tuesday, killing at least 26 people and injuring several at a meadow near Pahalgam town, in Anantnag district, Jammu and Kashmir, Friday, April 25, 2025.
ಪಹಲ್ಗಾಮ್​​​ನಲ್ಲಿ ಉಗ್ರರ ಅಟ್ಟಹಾಸ: ವಿಶ್ವಸಂಸ್ಥೆ ತೀವ್ರ ಖಂಡನೆ; ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಹೋರಾಡುವಂತೆ ಕರೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಜೋರ್ಡಾನ್ ರಾಜ ಅಬ್ದುಲ್ಲಾ II, ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರಿಂದ ಬೆಂಬಲ ಕೇಳಿಬಂದಿವೆ, ಅವರೆಲ್ಲರೂ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ಒಗ್ಗಟ್ಟು ಮತ್ತು ಬೆಂಬಲ ವ್ಯಕ್ತಪಡಿಸಿದ್ದಾರೆ.

ಉದ್ವಿಗ್ನತೆ ಭುಗಿಲೆದ್ದಂತೆ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಇರಾನ್ ಮುಂದಾಗಿದೆ. ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ ದಾಳಿಯನ್ನು ಟೆಹ್ರಾನ್, ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಉಲ್ಲೇಖಿಸಿ ಎರಡು ನೆರೆಹೊರೆಯವರ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ವಿದೇಶಾಂಗ ಇಲಾಖೆಯನ್ನು ಪರಿಣಾಮಕಾರಿಯಾಗಿ ಬಳಸಲು ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com