ಪಹಲ್ಗಾಮ್ ಉಗ್ರ ದಾಳಿ: ಚಾರ್ಧಾಮ್ ಯಾತ್ರೆ ಕೈಗೊಳ್ಳದಂತೆ 77 ಪಾಕಿಸ್ತಾನಿ ಹಿಂದೂಗಳಿಗೆ ನಿರ್ಬಂಧ

ಈ ವರ್ಷ ಚಾರ್ಧಾಮ್ ಯಾತ್ರೆ ಕೈಗೊಳ್ಳುವ ಪಾಕಿಸ್ತಾನಿ ಪ್ರಜೆಗಳ ಮೇಲೆ ಅಧಿಕಾರಿಗಳು ನಿಷೇಧ ಹೇರಿದ್ದಾರೆ ಎಂದು ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಡೆಹ್ರಾಡೂನ್: ಏಪ್ರಿಲ್ 30 ರಂದು ಪ್ರಾರಂಭವಾಗಲಿರುವ ಉತ್ತರಾಖಂಡದ ವಿಶ್ವಪ್ರಸಿದ್ಧ ಚಾರ್‌ಧಾಮ್ ಯಾತ್ರೆಗೆ ನೋಂದಾಯಿಸಿಕೊಂಡಿದ್ದ 77 ಪಾಕಿಸ್ತಾನಿ ಹಿಂದೂ ಯಾತ್ರಿಕರಿಗೆ ತೀವ್ರ ನಿರಾಶೆಯಾಗಿದೆ.

ಈ ವರ್ಷ ಚಾರ್ಧಾಮ್ ಯಾತ್ರೆ ಕೈಗೊಳ್ಳುವ ಪಾಕಿಸ್ತಾನಿ ಪ್ರಜೆಗಳ ಮೇಲೆ ಅಧಿಕಾರಿಗಳು ನಿಷೇಧ ಹೇರಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯ ನಂತರ "ಬದಲಾದ ಭದ್ರತಾ ಪರಿಸ್ಥಿತಿ"ಯ ನೇರ ಪರಿಣಾಮ ಈ ನಿರ್ಧಾರ ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ಜೊತೆಗೆ, ಈ ವರ್ಷದ ಯಾತ್ರೆಗೆ ಯುನೈಟೆಡ್ ಸ್ಟೇಟ್ಸ್, ನೇಪಾಳ ಮತ್ತು ಮಲೇಷ್ಯಾ ಸೇರಿದಂತೆ ಇತರ ಹಲವು ದೇಶಗಳಿಂದಲೂ ನೋಂದಣಿ ಮಾಡಲಾಗಿದೆ ಎಂದು ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆಯ ಯಾತ್ರಾ ವಿಭಾಗದ ಮೂಲಗಳು ದೃಢಪಡಿಸಿವೆ.

"ಏಪ್ರಿಲ್ 30 ರಿಂದ ಪ್ರಾರಂಭವಾಗುವ ಚಾರ್‌ಧಾಮ್ ಯಾತ್ರೆಗೆ ಆನ್‌ಲೈನ್ ನೋಂದಣಿ 21 ಲಕ್ಷ ಮೀರಿದೆ" ಎಂದು ಯಾತ್ರಾ ನೋಂದಣಿ ವಿಭಾಗದ ಪ್ರದೀಪ್ ಚೌಹಾಣ್ TNIE ಗೆ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಜೂನ್‌ನಿಂದ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

"ಇವರಲ್ಲಿ 24,729 ವಿದೇಶಿ ಪ್ರಜೆಗಳು ಯಾತ್ರೆ ಕೈಗೊಳ್ಳಲು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 77 ಮಂದಿ ಪಾಕಿಸ್ತಾನದವರಿದ್ದಾರೆ" ಎಂದು ಅವರು ಹೇಳಿದ್ದಾರೆ.

ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನಿ ನೋಂದಣಿದಾರರ ಪರಿಸ್ಥಿತಿ ಜಟಿಲವಾಗಿದೆ. ಈ ದಾಳಿಯು ದೇಶಾದ್ಯಂತ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಕೇಂದ್ರ ಸರ್ಕಾರವು ಪಾಕಿಸ್ತಾನದಿಂದ ಆಗಮಿಸುವ ವ್ಯಕ್ತಿಗಳಿಗೆ ವೀಸಾ ನೀಡುವುದನ್ನು ನಿಲ್ಲಿಸಿದೆ ಮತ್ತು ಪ್ರಸ್ತುತ ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳಿಗೆ 48 ಗಂಟೆಗಳ ಒಳಗೆ ಅವರ ದೇಶಕ್ಕೆ ಮರಳಲು ನಿರ್ದೇಶನ ಸೇರಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಸರ್ಕಾರಿ ಮೂಲಗಳ ಪ್ರಕಾರ, ಭದ್ರತಾ ಕಾಳಜಿಗಳ ನಂತರ ಇತ್ತೀಚೆಗೆ ವೀಸಾ ನಿಯಮಗಳನ್ನು ಬಿಗಿಗೊಳಿಸಲಾಗುತ್ತಿರುವ ನಡುವೆಯೂ, ಡೆಹ್ರಾಡೂನ್, ಹರಿದ್ವಾರ ಮತ್ತು ನೈನಿತಾಲ್ ಸೇರಿದಂತೆ ಜಿಲ್ಲೆಗಳಲ್ಲಿ ಸುಮಾರು 250 ಪಾಕಿಸ್ತಾನಿ ಪ್ರಜೆಗಳು ಉತ್ತರಾಖಂಡದಲ್ಲಿ ವಾಸಿಸುತ್ತಿದ್ದಾರೆ ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com