ನೀರು ನಿಲ್ಲಿಸಿದರೆ ರಕ್ತ ಹರಿಯುತ್ತೆ: ಬಿಲಾವಲ್ ಭುಟ್ಟೋ ಹೇಳಿಕೆಗೆ ಶಶಿ ತರೂರ್ ಪ್ರತಿಕ್ರಿಯೆ ಹೀಗಿದೆ...; Video

2016 ರ ಉರಿ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಯ ನಂತರ ಭಾರತ ಪ್ರತೀಕಾರ ತೆಗೆದುಕೊಂಡಿದೆ ಎಂದು ಹೇಳಿರುವ ತರೂರ್ ಈ ಬಾರಿ ಪಾಕಿಸ್ತಾನ ಭಾರತದಿಂದ ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗಬಹುದು ಎಂದು ಹೇಳಿದ್ದಾರೆ.
Shashi Tharoor
ಶಶಿ ತರೂರ್online desk
Updated on

ತಿರುವನಂತಪುರಂ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಜನತೆ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 26 ನಾಗರಿಕರ ಹತ್ಯಾಕಾಂಡದ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುಗೊಂಡಿರುವುದರ ನಡುವೆ, ಕಾಂಗ್ರೆಸ್ ಸಂಸದ ಶಶಿ ತರೂರ್ ಸ್ಪಷ್ಟ ಮಿಲಿಟರಿ ಪ್ರತಿಕ್ರಿಯೆ ಅನಿವಾರ್ಯ ಎಂದು ಹೇಳಿದ್ದಾರೆ.

ಗಡಿಯುದ್ದಕ್ಕೂ ಭಯೋತ್ಪಾದಕರಿಗೆ ತರಬೇತಿ ಮತ್ತು ಶಸ್ತ್ರಾಸ್ತ್ರಗಳನ್ನು ನೀಡುತ್ತಿದ್ದರೂ ಭಾರತದಲ್ಲಿ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ ಯಾವಾಗಲೂ ನಿರಾಕರಿಸುತ್ತದೆ, ಇದು ಕಾಲು ಶತಮಾನದಿಂದ ಕಂಡುಬರುವ "ದೀರ್ಘ ಮಾದರಿ" ಎಂದು ಮಾಜಿ ರಾಜತಾಂತ್ರಿಕ ಅಧಿಕಾರಿ ಹೇಳಿದ್ದಾರೆ.

"ಒಂದು ಮಾದರಿ ಇದೆ ಎಂಬುದು ಸ್ಪಷ್ಟವಾಗಿದೆ ಎಂದು ನಾನು ಭಾವಿಸುತ್ತೇನೆ. ಜನರನ್ನು ಪ್ರೋತ್ಸಾಹಿಸಲಾಗುತ್ತದೆ, ತರಬೇತಿ ನೀಡಲಾಗುತ್ತದೆ, ಶಸ್ತ್ರಸಜ್ಜಿತಗೊಳಿಸಲಾಗುತ್ತದೆ ಮತ್ತು ಆಗಾಗ್ಗೆ ಗಡಿಯುದ್ದಕ್ಕೂ ಮಾರ್ಗದರ್ಶನ ನೀಡಲಾಗುತ್ತದೆ. ನಂತರ ಪಾಕಿಸ್ತಾನವು ಎಲ್ಲಾ ಜವಾಬ್ದಾರಿಯನ್ನು ನಿರಾಕರಿಸುತ್ತದೆ. ಅಂತಿಮವಾಗಿ, ವಿದೇಶಿ ಗುಪ್ತಚರ ಸಂಸ್ಥೆಗಳು ಸೇರಿದಂತೆ ಜವಾಬ್ದಾರಿಯನ್ನು ಸ್ಥಾಪಿಸಲಾಗುತ್ತದೆ ಮತ್ತು ಸಾಬೀತುಪಡಿಸಲಾಗುತ್ತದೆ" ಎಂದು ಶಶಿ ತರೂರ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದರು.

2016 ರ ಉರಿ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಯ ನಂತರ ಭಾರತ ಪ್ರತೀಕಾರ ತೆಗೆದುಕೊಂಡಿದೆ ಎಂದು ಹೇಳಿರುವ ತರೂರ್ ಈ ಬಾರಿ ಪಾಕಿಸ್ತಾನ ಭಾರತದಿಂದ ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗಬಹುದು ಎಂದು ಹೇಳಿದ್ದಾರೆ.

"ಉರಿಯ ನಂತರ, ಸರ್ಕಾರ ಗಡಿಯಾಚೆ ಸರ್ಜಿಕಲ್ ಸ್ಟ್ರೈಕ್ ನಡೆಸಿತು, ಮತ್ತು ಪುಲ್ವಾಮಾ ನಂತರ, ಬಾಲಕೋಟ್ ವಾಯುದಾಳಿ ನಡೆಯಿತು. ಇಂದು, ನಾವು ಅದಕ್ಕಿಂತ ಹೆಚ್ಚಿನದನ್ನು ನೋಡಲಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಮಗೆ ಹಲವಾರು ಆಯ್ಕೆಗಳಿವೆ - ರಾಜತಾಂತ್ರಿಕ, ಆರ್ಥಿಕ, ಗುಪ್ತಚರ ಹಂಚಿಕೆ, ರಹಸ್ಯ ಮತ್ತು ಬಹಿರಂಗ ಕ್ರಮಗಳಿವೆ. ಆದರೆ ನಮಗೆ ಒಂದು ರೀತಿಯ ಗೋಚರವಾಗುವ ಮಿಲಿಟರಿ ಪ್ರತಿಕ್ರಿಯೆ ಅನಿವಾರ್ಯ" ಎಂದು ತಿರುವನಂತಪುರಂನ ಸಂಸದ ಹೇಳಿದ್ದಾರೆ.

Shashi Tharoor
ಸಿಂಧೂ ನದಿ ನೀರು ಬಿಡದಿದ್ದರೆ ನಿಮ್ಮ ರಕ್ತ ಹರಿಯುತ್ತದೆ: ಭಾರತಕ್ಕೆ ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಬೆದರಿಕೆ

"ರಾಷ್ಟ್ರ ಗೋಚರವಾಗುವಂತಹ ಮಿಲಿಟರಿ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿದೆ. ಅದು ಏನಾಗುತ್ತದೆ, ಎಲ್ಲಿರುತ್ತದೆ ಅಥವಾ ಯಾವಾಗ ಇರುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಆದರೆ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ನನಗೆ ಮನವರಿಕೆಯಾಗಿದೆ" ಎಂದು ಅವರು ಹೇಳಿದ್ದಾರೆ.

ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬಗ್ಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬಿಲಾವಲ್ ಭುಟ್ಟೋ-ಜರ್ದಾರಿ ಅವರ "ರಕ್ತ ಹರಿಯುತ್ತದೆ" ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ತರೂರ್, "ಇದು ಕೇವಲ ಉದ್ರೇಕಕಾರಿ ಮಾತು. ಪಾಕಿಸ್ತಾನಿಗಳು ಭಾರತೀಯರನ್ನು ಶಿಕ್ಷೆಯಿಲ್ಲದೆ ಕೊಲ್ಲಲು ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ನಾವು ಪಾಕಿಸ್ತಾನಿಗಳಿಗೆ ಏನನ್ನೂ ಮಾಡಲು ಬಯಸುವುದಿಲ್ಲ. ಆದರೆ ಅವರು ನಮಗೆ ಏನಾದರೂ ಮಾಡಿದರೆ, ಪ್ರತಿಕ್ರಿಯೆಗೆ ಸಿದ್ಧರಾಗಿರಿ. ರಕ್ತ ಹರಿಯುವುದಾದರೆ, ಅದು ನಮ್ಮದಕ್ಕಿಂತ ಅವರ ಕಡೆಯಿಂದ ಹೆಚ್ಚು ಹರಿಯಬಹುದು" ಎಂದು ತರೂರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com