CM Siddaramaiah ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿದ್ದಾರೆ: ಮಾಜಿ ಸಿಎಂ Jagadish Shettar

ಸಾರ್ವಜನಿಕವಾಗಿ ಮಾನಸಿಕ ಸ್ತಿಮಿತ ಕಳೆದಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಕೈ ಎತ್ತುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದು ಬೆಳಗಾವಿ ಸಂಸದರೂ ಆಗಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Jagadish Shettar
ಜಗದೀಶ್ ಶೆಟ್ಟರ್
Updated on

ದೆಹಲಿ: ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಎಸ್ ಪಿ ಮೇಲೆ ಕೈ ಎತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಸಾರ್ವಜನಿಕವಾಗಿ ಮಾನಸಿಕ ಸ್ತಿಮಿತ ಕಳೆದುಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಕೈ ಎತ್ತುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದು ಬೆಳಗಾವಿ ಸಂಸದರೂ ಆಗಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Jagadish Shettar
ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ; ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿದ್ದರಾಮಯ್ಯ!

ಬೆಳಗಾವಿಯಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದರಲ್ಲಿ ತಪ್ಪೇನಿದೆ? ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ. ಪ್ರತಿಭಟನೆಯನ್ನು ಸಿಎಂ ಸಿದ್ದರಾಮಯ್ಯ ಸ್ಥಿತಪ್ರಜ್ಞರಾಗಿ ಸ್ವೀಕರಿಸಬೇಕಿತ್ತು, ಅದು ಬಿಟ್ಟು ಒಬ್ಬ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಕಪಾಳ ಮೋಕ್ಷ ಮಾಡಲು ಮುಂದಾಗಿದ್ದು ಸಿಎಂ ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com